ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಕಾರಿನಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಶವ ಪತ್ತೆ

33 ವರ್ಷದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದೆ.. ಕೆ.ಆರ್.ನಗರ ತಾಲೂಕಿನ ಹನಸೋಗೆ ಗ್ರಾಮ ಪಂಚಾಯಿತಿ ಸದಸ್ಯ ಅಶೋಕ  ಮೃತ ವ್ಯಕ್ತಿ .

ಮೈಸೂರು: 33 ವರ್ಷದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದೆ.. ಕೆ.ಆರ್.ನಗರ ತಾಲೂಕಿನ ಹನಸೋಗೆ ಗ್ರಾಮ ಪಂಚಾಯಿತಿ ಸದಸ್ಯ ಅಶೋಕ  ಮೃತ ವ್ಯಕ್ತಿ .

ಪಿರಿಯಾಪಟ್ಟಣದ ಕಾರು ರಾವಂದೂರು -ಅತ್ತಿಗೋಡು ರಸ್ತೆಯ ಬದಿಯಲ್ಲಿ ಕಾರು ನಿಂತಿದ್ದು, ಸ್ಥಳೀಯರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಬಂದು ಕಾರ್‌ನ ಗ್ಲಾಸ್‌ ಒಡೆದು ನೋಡಿದಾಗ ಒಳಗಿದ್ದ ವ್ಯಕ್ತಿ ಕುಳಿತ ಸ್ಥಿತಿಯಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ.

ಕಾರ್‌ನಲ್ಲಿ ಇದ್ದ ಪೋನ್‌ ನಂಬರ್‌ಗಳಿಗೆ ಕರೆ ಮಾಡಿ ವಿಚಾರಿಸಿದಾಗ ಇವರು ಗ್ರಾಪಂ ಸದಸ್ಯ ಅಶೋಕ್‌ ಎಂಬುದು ತಿಳಿದುಬಂದಿದ್ದು, ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. 

ಮಾಜಿ  ಸಚಿವ ಸಾ.ರಾ ಮಹೇಶ್ ಅವರ ಹಿಂಬಾಲಕರಾಗಿದ್ದ ಅಶೋಕ್, ಚುಂಚನಕಟ್ಟೆ ಹೋಬಳಿ ಜೆಡಿಎಸ್ ಯುವ ಘಟಕದ ಅಧ್ಯಕ್ಷರೂ ಆಗಿದ್ದರು.

ಇವರು ಮೂಲತಃ ಕೆ.ಆರ್‌.ನಗರ ತಾಲೂಕು ಹೊಳೆತಂದ್ರೆ ಗ್ರಾಮದವರಾಗಿದ್ದಾರೆ. ಪಿರಿಯಾಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

SCROLL FOR NEXT