ಚಂದ್ರಯಾನ-2 
ರಾಜ್ಯ

ನಮ್ಮ ಬೆಂಬಲಕ್ಕೆ ನಿಂತಿದ್ದಕ್ಕೆ ಧನ್ಯವಾದ: ಭಾರತೀಯರಿಗೆ ಇಸ್ರೋ ಕೃತಜ್ಞತೆ

ವಿಕ್ರಮ್ ಲ್ಯಾಂಡರ್ ಸಂಪರ್ಕ ಸಾಧಿಸುವಲ್ಲಿ ಹಿನ್ನೆಡೆ ಅನುಭವಿಸಿದರೂ, ವಿಜ್ಞಾನಿಗಳ ಸಾಹಸಕ್ಕೆ ಬೆಂಬಲವಾಗಿದ್ದ ಭಾರತೀಯರಿಗೆ ಇಸ್ರೋ ಧನ್ಯವಾದ ಸಲ್ಲಿಸಿದೆ.  

ಬೆಂಗಳೂರು: ವಿಕ್ರಮ್ ಲ್ಯಾಂಡರ್ ಸಂಪರ್ಕ ಸಾಧಿಸುವಲ್ಲಿ ಹಿನ್ನೆಡೆ ಅನುಭವಿಸಿದರೂ, ವಿಜ್ಞಾನಿಗಳ ಸಾಹಸಕ್ಕೆ ಬೆಂಬಲವಾಗಿದ್ದ ಭಾರತೀಯರಿಗೆ ಇಸ್ರೋ ಧನ್ಯವಾದ ಸಲ್ಲಿಸಿದೆ.  

ನಮ್ಮ ಬೆಂಬಲಕ್ಕೆ ನಿಂತಿದ್ದಕ್ಕಾಗಿ ಧನ್ಯವಾದಗಳು. ಪ್ರಪಂಚದಾದ್ಯಂತ ಇರುವ ಭಾರತೀಯರ ಕನಸು, ಆಶಯಗಳಿಗೆ ಅನುಗುಣವಾಗಿ ನಾವು ಮುಂದಕ್ಕೆ ಹೋಗುತ್ತೇವೆ. 
 
ಭಾನೆತ್ತರಕ್ಕೆ ಗುರಿ ಸಾಧಿಸಲು ಪ್ರೇರಣೆ ನೀಡಿದ್ದಕ್ಕೆ ಧನ್ಯವಾದಗಳು ಎಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದೆ. 

ಚಂದ್ರನ ದಕ್ಷಿಣ ಧ್ರುವದ ಮೇಲೆ ಸಾಫ್ಟ್ ಲ್ಯಾಂಡ್ ಮಾಡಬೇಕಿದ್ದ ವಿಕ್ರಮ್ ಲ್ಯಾಂಡರ್, ಲ್ಯಾಂಡಿಂಗ್ ಗೂ ಕೇವಲ 400 ಮೀಟರ್ ದೂರದಲ್ಲಿ ಭೂಮಿಯೊಂದಿಗೆ ತನ್ನ ಸಂಪರ್ಕ ಕಳೆದುಕೊಂಡಿತ್ತು. ಬಳಿಕ ಚಂದ್ರನ ಮೇಲೆ ವಾಲಿದ ರೀತಿ ಕಂಡು ಬಂದಿತ್ತು. 

ಮತ್ತೆ ಸಂಪರ್ಕ ಸಾಧಿಸಲು ಇಸ್ರೋ ವಿಜ್ಞಾನಿಗಳು ಪ್ರಯತ್ನಿಸಿದರೂ ಯಶಸ್ವಿ ಸಿಗಲಿಲ್ಲ. ಆದರೆ, ಇಸ್ರೋ ವಿಜ್ಞಾನಿಗಳ ಚಂದ್ರಯಾನ-2 ಸಾಹಸಕ್ಕೆ ಇಡೀ ದೇಶ ಮಾತ್ರವಲ್ಲದೇ ಪ್ರಪಂಚವೇ ಮೆಚ್ಚುಗೆ ವ್ಯಕ್ತಪಡಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT