ರಾಜ್ಯ

ವರ್ಷಕ್ಕೆರಡು ಚುನಾವಣೆ ಎದುರಿಸುವುದು ಕಷ್ಟ:ವೆಂಕಟರಾವ್ ನಾಡಗೌಡ

Manjula VN

ಬೆಂಗಳೂರು: ಪ್ರಜಾತಂತ್ರ ವ್ಯವಸ್ಥೆಯುಳ್ಳ ದೇಶದಲ್ಲಿ ವರ್ಷಕ್ಕೆ ಎರಡು ಚುನಾವಣೆ ನಡೆಯುವುದು ಸೂಕ್ತವಲ್ಲ, ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಈಗಲೇ ನಿರ್ದಿಷ್ಟವಾಗಿ ಹೇಳುವುದು ಕಷ್ಟ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ನಮ್ಮ ದೇಶದಲ್ಲಿ ಪದೇಪದೇ ಚುನಾವಣೆ ಎದುರಾಗುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಗೊಂದಲವಿದ್ದ ಕಾರಣ ಸರ್ಕಾರ ಪತನಗೊಳ್ಳಬೇಕಾಯಿತು.

SCROLL FOR NEXT