ಸಂಗ್ರಹ ಚಿತ್ರ 
ರಾಜ್ಯ

ಎಫ್ಐಆರ್ ದಾಖಲಿಸಲು ಠಾಣೆ ವ್ಯಾಪ್ತಿ ಕೇಳುವಂತಿಲ್ಲ: ಪೊಲೀಸರಿಗೆ ಹೈಕೋರ್ಟ್

ಸಾರ್ವಜನಿಕರು ಯಾವುದೇ ಠಾಣೆಗೆ ದೂರು ನೀಡಿದಾಗ ಠಾಣೆ ವ್ಯಾಪ್ತಿ ಕೇಳದೆ ಎಫ್ಐಆರ್ ದಾಖಲಿಸಿಕೊಂಡು ನಂತರ ಸಂಬಂಧಪಟ್ಟ ಠಾಣೆಗಳಿಗೆ ಎಫ್ಐಆರ್ ಕಳಿಸಬೇಕೆಂದು ಎಲ್ಲಾ ಠಾಣೆಗಳಿಗೆ ಸೂಚಿಸಿ ಈ ಕುರಿತು ಆದೇಶವನ್ನು ಒಂದು ತಿಂಗಳೊಳಗೆ ಹೊರಡಿಸುವಂತೆ ರಾಜ್ಯ ಪೊಲೀಸ್ ನಿರ್ದೇಶಕರಿಗೆ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.

ಬೆಂಗಳೂರು: ಸಾರ್ವಜನಿಕರು ಯಾವುದೇ ಠಾಣೆಗೆ ದೂರು ನೀಡಿದಾಗ ಠಾಣೆ ವ್ಯಾಪ್ತಿ ಕೇಳದೆ ಎಫ್ಐಆರ್ ದಾಖಲಿಸಿಕೊಂಡು ನಂತರ ಸಂಬಂಧಪಟ್ಟ ಠಾಣೆಗಳಿಗೆ ಎಫ್ಐಆರ್ ಕಳಿಸಬೇಕೆಂದು ಎಲ್ಲಾ ಠಾಣೆಗಳಿಗೆ ಸೂಚಿಸಿ ಈ ಕುರಿತು ಆದೇಶವನ್ನು ಒಂದು ತಿಂಗಳೊಳಗೆ ಹೊರಡಿಸುವಂತೆ ರಾಜ್ಯ ಪೊಲೀಸ್ ನಿರ್ದೇಶಕರಿಗೆ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ. 

ನಗರದ ವಕೀಲ ಎಸ್.ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಪೀಠ ಗುರುವಾರ ಈ ಆದೇಶ ನೀಡಿತು.
 
ಸಾರ್ವಜನಿಕರು ಯಾವುದೇ ಠಾಣೆಗೆ ತೆರಳಿ ದೂರು ನೀಡಿದರೂ, ಠಾಣೆಯ ವ್ಯಾಪ್ತಿ ಕೇಳದೆ ಎಫ್ಐಆರ್ ದಾಖಲಿಸಬೇಕು. ಆ ನಂತರ ಎಫ್ಐಆರ್ ಅನ್ನು ಸಂಬಂಧಪಟ್ಟ ಠಾಣೆಗಳಿಗೆ ಕಳುಹಿಸಬೇಕು. ಪ್ರಕರಣ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬ ಕಾರಣ ನೀಡಿ ಎಫ್ಐಆರ್ ದಾಖಲಿಸಲು ನಿರಾಕರಿಸಬಾರದು ಎಂದು ಎಲ್ಲಾ ಠಾಣಾಧಿಕಾರಿಗಳಿಗೆ ಸೂಚಿಸಿ ತಿಂಗಳೊಳಗೆ ಆದೇಶ ಹೊರಡಿಸಬೇಕು. ಒಂದೊಮ್ಮೆ ದೂರು ಸ್ವೀಕರಿಸಲು ನಿರಾಕರಿಸಿದರೆ, ಅಂಥಹವರ ವಿರುದ್ಧ ಸಾರ್ವಜನಿಕರು ನೀಡುವ ದೂರಿನ ಮೇಲೆ ಇಲಾಖೆ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸುವ ಕುರಿತು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಬೇಕು ಎಂದು ಡಿಜಿ ಮತ್ತು ಐಜಿಪಿಗೆ ಹೈಕೋರ್ಟ್ ನಿರ್ದೇಶಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT