ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಡಿಕೆ ಶಿವಕುಮಾರ್ ಗನ್ ಮ್ಯಾನ್ ಎಂದು ಹೇಳಿಕೊಂಡು ಲಕ್ಷಾಂತರ ವಂಚನೆ 

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಗನ್ ಮ್ಯಾನ್ ಎಂದು ಹೇಳಿಕೊಂಡ  ವ್ಯಕ್ತಿಯೊಬ್ಬ ಕೆಲಸ ಕೊಡಿಸುವುದಾಗಿ ಹೇಳಿ ಹಣ ವಂಚಿಸಿದ ಆರೋಪಿಯನ್ನು  ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಗನ್ ಮ್ಯಾನ್ ಎಂದು ಹೇಳಿಕೊಂಡ  ವ್ಯಕ್ತಿಯೊಬ್ಬ ಕೆಲಸ ಕೊಡಿಸುವುದಾಗಿ ಹೇಳಿ ಹಣ ವಂಚಿಸಿದ ಆರೋಪಿಯನ್ನು  ಪೊಲೀಸರು ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಹೊಳೇನರಸೀಪುರ ನಿವಾಸಿ ವೀರಭದ್ರ  ಮೋಸ ಹೊದವರು, ಮೆಜೆಸ್ಟಿಕ್ ನಲ್ಲಿ ಜ್ಯೂಸ್ ಅಂಗಡಿ ಇಟ್ಟುಕೊಂಡಿದ್ದಾರೆ.ಈ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಲಾಗಿದೆ, ವೀರಭದ್ರ ಅವರ ಅಂಗಡಿಗೆ ಜ್ಯೂಸ್ ಕುಡಿಯಲು ಬಂದಾಗ ಅವರ ಬಗ್ಗೆ ಆರೋಪಿ ಮಾಹಿತಿ ಪಡೆದುಕೊಂಡಿದ್ದಾನೆ.

ನನ್ನ ಹೆಸರು ಸುನೀಲ್, ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಗನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾಗಿ ಹೇಳಿದ್ದಾನೆ, ಜೊತೆಗೆ ಆತನಿಗೆ ನಂಬಿಕೆ ಬರುವಂತೆ ಮಾಡಲು ಡಿಕೆ ಶಿವಕುಮಾರ್ ಅವರ ಜೊತೆಗೆ ತೆಗೆಸಿಕೊಂಡಿರುವ ಫೋಟೆ ತೋರಿಸಿದ್ದಾನೆ. ಕೆಇಬಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿದ್ದಾನೆ.

ಕೆಲಸಕ್ಕಾಗಿ ಸರ್ಕಾರಕ್ಕೆ ಮೂರು ಲಕ್ಷ ಲಂಚ ಕೊಡಬೇಕು ಎಂದು ಹೇಳಿದ್ದಾನೆ, ಜೊತೆಗೆ ಮೂರು ಕಂತಿನಲ್ಲಿ ನೀಡುವಂತೆ ತಿಳಿಸಿದ್ದಾನೆ, ಮೊದಲ ಕಂತಿನಲ್ಲಿ ವೀರಭದ್ರ ಹಣ ನೀಡಿದ್ದಾರೆ. ಜೊತೆಗೆ ಇದಾದ 15 ದಿನಗಳ ನಂತರ ಕರೆ ಮಾಡಿದ ಸುನೀಲ್, ಈ ಸಂಬಂಧ ಶಿವಕುಮಾರ್ ಜೊತೆ ಮಾತನಾಡಿದ್ದೇನೆ, 60 ಸಾವಿರ ರು ರೆಡಿ ಮಾಡಿಟ್ಟುಕೊಂಡಿರು ಎಂದು ಹೇಳಿದ್ದಾನೆ, ಆದರೆ ಹ ಕೊಡಲು  ವೀರಭದ್ರ ನಿರಾಕರಿಸಿದ್ದಾನೆ, ಆದರೆ ಈ ವೇಳೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.

ಅದಾದ ನಂತರ ವೀರಭದ್ರ ಪೊಲೀಸರಿಗೆ ದೂರು ದಾಖಲಿಸಿದ್ದಾರೆ, 28 ವರ್ಷದ ಸುನೀಲ್ ನನ್ನು ಬಂಧಿಸಿದ್ದಾರೆ, ಮಾಜಿ ಸಚಿವ ಶಿವಕುಮಾರ್ ಅವರ ಹೆಸರನ್ನು ಬಳಸಿಕೊಂಡು ಉದ್ಯೋಗ ಕೊಡಿಸುವುದಾಗಿ ಹಲವರಿಗೆ ವಂಚಿಸಿರುವುದಾಗಿ ತನಿಖಾಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT