ಮೈಸೂರು ಜಿಲ್ಲಾಧಿಕಾರಿ 
ರಾಜ್ಯ

ದಸರಾ ಉತ್ಸವ ಹಿನ್ನೆಲೆ: ನೀತಿ ಸಂಹಿತೆ ವಿನಾಯ್ತಿಗೆ ಮೈಸೂರು ಜಿಲ್ಲಾಧಿಕಾರಿ ಮನವಿ 

ದಸರಾ ಉತ್ಸವದ  ಹಿನ್ನೆಲೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಮೈಸೂರು ಜಿಲ್ಲೆಯ ಇತರೆಡೆ ಚುನಾವಣಾ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಮೈಸೂರು: ದಸರಾ ಉತ್ಸವದ  ಹಿನ್ನೆಲೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಮೈಸೂರು ಜಿಲ್ಲೆಯ ಇತರೆಡೆ ಚುನಾವಣಾ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಅನರ್ಹ ಶಾಸಕರಿಂದ ತೆರವಾಗಿರುವ ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದು ಉಪ ಚುನಾವಣೆ ಘೋಷಣೆಯಾಗಿದ್ದು, ಆಯಾ ಕ್ಷೇತ್ರಗಳಿಗೆ ಸಂಬಂಧಿಸಿದ ಸಂಪೂರ್ಣ ಜಿಲ್ಲೆಗೆ ನೀತಿ ಸಂಹಿತೆ ಅನ್ವಯವಾಗಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಡೆಯಲಿರುವ ಸಾಂಪ್ರದಾಯಿಕ ಹಾಗೂ ಸಾಂಸ್ಕೃತಿಕ ಮಹತ್ವವುಳ್ಳ ದಸರಾ ಹಬ್ಬದ ಹಿನ್ನೆಲೆಯಲ್ಲಿ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಅಭಿರಾಮ್  ಜಿ. ಶಂಕರ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು,ಪ್ರಸ್ತುತ ಯಾವುದೇ ಸಚಿವರು ಇಲ್ಲವೇ ಜನಪ್ರತಿನಿಧಿಗಳು ಅಧಿಕೃತ ಸಭೆಗಳನ್ನು ನಡೆಸಲು ಅವಕಾಶವಿಲ್ಲ.ಅವರು ಜಿಲ್ಲೆಯಲ್ಲಿ ಕಚೇರಿಯ ವಾಹನಗಳನ್ನು ಕೂಡಾ ಬಳಸುವಂತಿಲ್ಲ.ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು.ಆದರೆ,ಯಾವುದೇ ರಾಜಕೀಯ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT