ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ 
ರಾಜ್ಯ

ಎಲ್ಲರೂ ಕಾಂಗ್ರೆಸ್ ಸಹವಾಸ ಬೇಡ ಎನ್ನುತ್ತಿದ್ದಾರೆ: ಹೆಚ್.ಡಿ.ದೇವೇಗೌಡ

ಪಕ್ಷದಲ್ಲಿರುವ ಪ್ರತೀಯೊಬ್ಬ ಕಾರ್ಯಕರ್ತನೂ ಕಾಂಗ್ರೆಸ್ ಸಹವಾಸ ಬೇಡ ಎನ್ನುತ್ತಿದ್ದಾರೆಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ. 

ಬೆಂಗಳೂರು: ಪಕ್ಷದಲ್ಲಿರುವ ಪ್ರತೀಯೊಬ್ಬ ಕಾರ್ಯಕರ್ತನೂ ಕಾಂಗ್ರೆಸ್ ಸಹವಾಸ ಬೇಡ ಎನ್ನುತ್ತಿದ್ದಾರೆಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ. 

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಜೊತೆ ಕೈಜೋಡಿಸಿ ಸಾಕಷ್ಟು ಅನುಭವಿಸಿರುವ ಕುಮಾರಸ್ವಾಮಿಯವರಿಗೆ, ಅದರ ಜೊತೆ ಮೈತ್ರಿ ಮುಂದುವರೆಸುವ ಇಷ್ಟವಿಲ್ಲ. 15 ವಿಧಾನಸಭಾ ಕ್ಷೇತ್ರಗಳಲ್ಲೂ ಸ್ಪರ್ಧೆ ನಡೆಸಬೇಕೆಂದು ಇಚ್ಛಿಸುತ್ತಿದ್ದಾರೆಂದು ಹೇಳಿದ್ದಾರೆ. 

30 ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಕಳೆದ 14 ತಿಂಗಳಿಂದ ಅವರು ಅನುಭವಿಸಿರುವ ಯಾತನೆ ಹೇಳಲು ಅಸಾಧ್ಯವಾಗಿದೆ. ಕಾಂಗ್ರೆಸ್ ಅಥವಾ ಬಿಜೆಪಿ ಜೊತೆಗೆ ಕೈಜೋಡಿಸುವುದು ಅವರಿಗೆ ಇಷ್ಟವಿಲ್ಲ. ಮೈತ್ರಿ ಕುರಿತಂತೆ ಭಾನುವಾರ ಅಂತಿಮವಾಗಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT