ಮಂಗಳೂರು: ಕೃಷ್ಣಮೃಗ ಚರ್ಮ ಮಾರಾಟ ಜಾಲ ಪತ್ತೆ, ನಾಲ್ವರ ಬಂಧನ 
ರಾಜ್ಯ

ಮಂಗಳೂರು: ಕೃಷ್ಣಮೃಗ ಚರ್ಮ ಮಾರಾಟ ಜಾಲ ಪತ್ತೆ, ನಾಲ್ವರ ಬಂಧನ

ಮಂಗಳೂರು ವಿಶೇಷ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿ ಕೃಷ್ಣಮೃಗ ಚರ್ಮ ಮಾರಾಟ ಜಾಲವನ್ನು ಸೋಮವಾರ ಪತ್ತೆ ಹಚ್ಚಿ, ನಾಲ್ವರನ್ನು ಬಂಧಿಸಿದ್ದಾರೆ. 

ಮಂಗಳೂರು: ಮಂಗಳೂರು ವಿಶೇಷ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿ ಕೃಷ್ಣಮೃಗ ಚರ್ಮ ಮಾರಾಟ ಜಾಲವನ್ನು ಸೋಮವಾರ ಪತ್ತೆ ಹಚ್ಚಿ, ನಾಲ್ವರನ್ನು ಬಂಧಿಸಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ದಾಟ್ನಾಳ್ ನಿವಾಸಿಗಳಾದ ರವಿ ಹನುಮಂತಪ್ಪ (32), ಮಲ್ಲಪ್ಪ (32), ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ನಿವಾಸಿಗಳಾದ ಪರಶುರಾಮ ಲಮಾಣಿ (32), ಟಿಪ್ಪು ಸುಲ್ತಾನ್ (33) ಬಂಧಿತ ಆರೋಪಿಗಳು.

ಸೋಮವಾರ ಬೆಳಗ್ಗೆ 8:30ಕ್ಕೆ ಅರಣ್ಯ ಸಂಚಾರ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಲಾಯಿತು. ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪ ನಾಲ್ವರು ಅನುಮಾನಾಸ್ಪದವಾಗಿ ನಿಂತುಕೊಂಡಿದ್ದರು. ಪೊಲೀಸರು ಜೀಪಿನಿಂದ ಇಳಿಯುತ್ತಿರುವುದನ್ನು ನೋಡಿದ ಆರೋಪಿಗಳು ಓಡಿ ಹೋಗಲು ಯತ್ನಿಸಿದರು. ಆಗ ಆರೋಪಿಗಳನ್ನು ಬೆನ್ನಟ್ಟಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ವಿಚಾರಿಸಿದಾಗ ಕೃಷ್ಣಮೃಗ ಚರ್ಮ ಹಾಗೂ ಕೊಂಬನ್ನು ಮಾರಾಟಕ್ಕೆ ತಂದಿರುವುದು ಪತ್ತೆಯಾಗಿದೆ. ಅವರಿಂದ ಎರಡು ಕೃಷ್ಣಮೃಗ ಚರ್ಮ ಹಾಗೂ ಒಂದು ಜೊತೆ ಕೊಂಬನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಸಧ್ಯ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮಕ್ಕಾಗಿ ಮಂಗಳೂರು ವಲಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

MCAಗೆ FDA ಶಾಕ್: ಕ್ರಿಕೆಟ್ ಮಂಡಳಿಯ 5 ಆಹಾರ ಮಳಿಗೆಗಳ ಲೈಸೆನ್ಸ್ ಅಮಾನತು

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್.ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು