ಮಂಗಳೂರು: ಕೃಷ್ಣಮೃಗ ಚರ್ಮ ಮಾರಾಟ ಜಾಲ ಪತ್ತೆ, ನಾಲ್ವರ ಬಂಧನ 
ರಾಜ್ಯ

ಮಂಗಳೂರು: ಕೃಷ್ಣಮೃಗ ಚರ್ಮ ಮಾರಾಟ ಜಾಲ ಪತ್ತೆ, ನಾಲ್ವರ ಬಂಧನ

ಮಂಗಳೂರು ವಿಶೇಷ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿ ಕೃಷ್ಣಮೃಗ ಚರ್ಮ ಮಾರಾಟ ಜಾಲವನ್ನು ಸೋಮವಾರ ಪತ್ತೆ ಹಚ್ಚಿ, ನಾಲ್ವರನ್ನು ಬಂಧಿಸಿದ್ದಾರೆ. 

ಮಂಗಳೂರು: ಮಂಗಳೂರು ವಿಶೇಷ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿ ಕೃಷ್ಣಮೃಗ ಚರ್ಮ ಮಾರಾಟ ಜಾಲವನ್ನು ಸೋಮವಾರ ಪತ್ತೆ ಹಚ್ಚಿ, ನಾಲ್ವರನ್ನು ಬಂಧಿಸಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ದಾಟ್ನಾಳ್ ನಿವಾಸಿಗಳಾದ ರವಿ ಹನುಮಂತಪ್ಪ (32), ಮಲ್ಲಪ್ಪ (32), ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ನಿವಾಸಿಗಳಾದ ಪರಶುರಾಮ ಲಮಾಣಿ (32), ಟಿಪ್ಪು ಸುಲ್ತಾನ್ (33) ಬಂಧಿತ ಆರೋಪಿಗಳು.

ಸೋಮವಾರ ಬೆಳಗ್ಗೆ 8:30ಕ್ಕೆ ಅರಣ್ಯ ಸಂಚಾರ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಲಾಯಿತು. ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪ ನಾಲ್ವರು ಅನುಮಾನಾಸ್ಪದವಾಗಿ ನಿಂತುಕೊಂಡಿದ್ದರು. ಪೊಲೀಸರು ಜೀಪಿನಿಂದ ಇಳಿಯುತ್ತಿರುವುದನ್ನು ನೋಡಿದ ಆರೋಪಿಗಳು ಓಡಿ ಹೋಗಲು ಯತ್ನಿಸಿದರು. ಆಗ ಆರೋಪಿಗಳನ್ನು ಬೆನ್ನಟ್ಟಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ವಿಚಾರಿಸಿದಾಗ ಕೃಷ್ಣಮೃಗ ಚರ್ಮ ಹಾಗೂ ಕೊಂಬನ್ನು ಮಾರಾಟಕ್ಕೆ ತಂದಿರುವುದು ಪತ್ತೆಯಾಗಿದೆ. ಅವರಿಂದ ಎರಡು ಕೃಷ್ಣಮೃಗ ಚರ್ಮ ಹಾಗೂ ಒಂದು ಜೊತೆ ಕೊಂಬನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಸಧ್ಯ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮಕ್ಕಾಗಿ ಮಂಗಳೂರು ವಲಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT