ಕರ್ನಾಟಕ ಹೈಕೋರ್ಟ್ 
ರಾಜ್ಯ

ಟಿಡಿಆರ್ ಹಗರಣ; ಎಸ್ಐಟಿ ರಚನೆ ಕುರಿತ ಏಕಸದಸ್ಯ ಪೀಠದ ಆದೇಶ ರದ್ದು

 ಬೃಹತ್‌ ಬೆಂಗಳೂರು ಮಹಾನಗರದ (ಬಿಬಿಎಂಪಿ) ವ್ಯಾಪ್ತಿಯ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್) ಮತ್ತು ಸ್ವಾಧೀನಾನುಭವ ಪತ್ರಗಳ ‌(ಒಸಿ) ಕುರಿತ ದೂರುಗಳ ತನಿಖೆತೆ ಎಸ್.ಪಿ ಅಬ್ದುಲ್ ಅಹದ್ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ನಿರ್ದೇಶಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಪಡಿಸಿದೆ.

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರದ (ಬಿಬಿಎಂಪಿ) ವ್ಯಾಪ್ತಿಯ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್) ಮತ್ತು ಸ್ವಾಧೀನಾನುಭವ ಪತ್ರಗಳ ‌(ಒಸಿ) ಕುರಿತ ದೂರುಗಳ ತನಿಖೆತೆ ಎಸ್.ಪಿ ಅಬ್ದುಲ್ ಅಹದ್ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ನಿರ್ದೇಶಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಪಡಿಸಿದೆ.

ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ ಪೀಠದ ಆದೇಶವನ್ನು ಭಾಗಶಃ ಪುರಸ್ಕರಿಸಿದೆ. 

ಟಿಡಿಆರ್ ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು, ಈ ಪ್ರಕರಣದ ತನಿಖೆಯನ್ನು ಎಸಿಬಿ ಅವರೇ ನಡೆಸಲಿ. ಹಾಗೇ ತನಿಖಾಧಿಕಾರಿ ಯಾರಾಗಬೇಕೆಂಬುದನ್ನು ಎಸಿಬಿ ಐಜಿಪಿ ನಿರ್ಧಾರ ಮಾಡಲಿ ಎಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT