ಆರೋಪಿ ಮಿಥುನ್ 
ರಾಜ್ಯ

ಚಿಕ್ಕಮಗಳೂರು: ಬಾಲ್ಯ ಸ್ನೇಹಿತನಿಂದ ಇರಿತಕ್ಕೊಳಗಾಗಿದ್ದ ಯುವತಿ ಸಾವು 

ಐದು ದಿನಗಳ ಹಿಂದೆ ಭಗ್ನ ಪ್ರೇಮಿಯಿಂದ ಇರಿತಕ್ಕೊಳಗಾಗಿದ್ದ 23 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ  ಸಾವನ್ನಪ್ಪಿದ್ದಾಳೆ.

ಚಿಕ್ಕಮಗಳೂರು: ಐದು ದಿನಗಳ ಹಿಂದೆ ಭಗ್ನ ಪ್ರೇಮಿಯಿಂದ ಇರಿತಕ್ಕೊಳಗಾಗಿದ್ದ 23 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ  ಸಾವನ್ನಪ್ಪಿದ್ದಾಳೆ.

ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬಸಾಪುರದ ಇಪ್ಪತ್ಮೂರು ವರ್ಷದ ಯುವತಿ ಬಿಂದು ಮೃತ ಯುವತಿ. ಮೂಡಿಗೆರೆ ತಾಲೂಕಿನ ಮಹಲ್ಗೋಡಿನಲ್ಲಿ ಕೆಲ ದಿನಗಳ ಹಿಂದೆ ಮಿಥುನ್ ಎಂಬಾತ ಆಕೆಗೆ ಚಾಕುವಿನಿಂದ ಇರಿದಿದ್ದ.

ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಿಂದುಗೆ ಚಾಕುವಿನಿಂದ ಇರಿದಿದ್ದ ಮಿಥುನ್ ಆ ನಂತರ ನಾಪತ್ತೆಯಾಗಿದ್ದ. ಆ ಮೇಲೆ ತಾನಾಗಿಯೇ ಬಂದು ಪೊಲೀಸರಿಗೆ ಶರಣಾಗಿದ್ದ. ಚಾಕು ಇರಿತಕ್ಕೆ ಒಳಗಾಗಿದ್ದ ಬಿಂದುವಿನ ಸ್ಥಿತಿ ಗಂಭೀರವಾಗಿತ್ತು. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಬಿಂದು ಶನಿವಾರ ಮೃತಪಟ್ಟಿದ್ದಾಳೆ. 

ಆರೋಪಿ ಮಿಥುನ್ ಮತ್ತು ಮೃತ ಯುವತಿ ಬಿಂದು ಇಬ್ಬರು ಕ್ಲಾಸ್ ಮೇಟ್ಸ್ ಆಗಿದ್ದರು, 10ನೇ ತರಗತಿ ವರೆಗೂ ಜೊತೆಗೆ ಓದಿದ್ದರು. ಅದಾದ ನಂತರ ಇಬ್ಬರು ಬೇರೆ ಬೇರೆ ಯಾಗಿದ್ದರು, ಮತ್ತೆ ಫೇಸ್ ಬುಕ್ ನಲ್ಲಿ ಮತ್ತೆ ಒಂದಾಗಿದ್ದರು. ಕೆಲಸ ವರ್ಷಗಳ ನಂತರ ಭೇಟಿಯಾದ ಇಬ್ಬರು ಜೊತೆಯಾಗಿ ಓಡಾಡುತ್ತಿದ್ದರು,.ಆರೋಪಿ ಬಿಂದುವನ್ನು ಪ್ರೀತಿ ಮಾಡುತ್ತಿದ್ದ ಎನ್ನಲಾಗಿದೆ,

ಐದು ದಿನಗಳ ಹಿಂದೆ ಬಿಂದು ಮತ್ತು ಮಿಥುನ್  ಕಳಸ ಮತ್ತು ಹೊರನಾಡಿಗೆ ಬೈಕ್ ನಲ್ಲಿ ಹೋಗಿದ್ದರು, ಈ ವೇಳೆ  ಬಿಂದು ತನ್ನ ಮಾಜಿ ಗೆಳೆಯನ ಬಗ್ಗೆ ಹೇಳಿಕೊಂಡಿದ್ದಾಳೆ. ಇದರಿಂದ ಕೋಪಗೊಂಡ ಮಿಥುನ್ ಆಕೆಯನ್ನು ನದಿಗೆ ತಳ್ಳಿದ್ದಾನೆ, ಆಕೆ ನದಿಯಂದ ಎದ್ದು ಬಂದ ಮೇಲೆ ಆಕೆ ಮೇಲೆ ಕಲ್ಲು ತೂರಿದ್ದಾನೆ. ನಂತರ ಸ್ಕ್ರೂ ಡ್ರೈವರ್ ನಿಂದ ಆಕೆಯ ಹೊಟ್ಟೆ ಮತ್ತು ಖಾಸಗಿ ಭಾಗಗಳಿಗೆ ಚುಚ್ಚಿ ಅಲ್ಲಿಂದ ಪರಾರಿಯಾಗಿದ್ದನು. ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳದಲ್ಲಿ ಮುಂದುವರಿದ ರಾಜಕೀಯ ಹಿಂಸಾಚಾರ: ಅಭಿಷೇಕ್ ಬೆನ್ನಲ್ಲೇ ಕಲ್ಯಾಣ್ ಬ್ಯಾನರ್ಜಿ ಮೇಲೂ ದಾಳಿ, BJP ವಿರುದ್ಧ ಆರೋಪ..!

ಇರಾನ್ ಜೊತೆ ಶಾಂತಿ ಒಪ್ಪಂದದತ್ತ ಅಮೆರಿಕಾ; ಅಣ್ವಸ್ತ್ರ ತ್ಯಜಿಸಲು ಒಪ್ಪಿದ ಟೆಹ್ರಾನ್, ಟ್ರಂಪ್ ಮಹತ್ವದ ಹೇಳಿಕೆ..!

T-20 ಮ್ಯಾಚ್ ನಂತೆ ಹೊಸ ಸರ್ಕಾರ: ಡಿಕೆ ಶಿವಕುಮಾರ್ ಆಕ್ಷನ್-ಪ್ಯಾಕ್ ಇನ್ನಿಂಗ್ಸ್; 'ಬಂಡೆ' 'ಪವರ್ ಪ್ಲೇ'- ಆಕ್ರಮಣಕಾರಿ ಬ್ಯಾಟಿಂಗ್!

ಭಾರತೀಯ ಸೇನೆಗೆ ನೂತನ ಸಾರಥಿ: CDS ಆಗಿ ಎನ್‌ಎಸ್ ರಾಜಾ ಸುಬ್ರಮಣಿ ಅಧಿಕಾರ ಸ್ವೀಕಾರ..!

US-Iran war: ಶಾಂತಿ ಕರಡು ಪ್ರತಿಗೆ ತಿದ್ದುಪಡಿ: ಪರಮಾಣು ಮುಕ್ತ ಇರಾನ್‌ಗೆ ಟ್ರಂಪ್ ಪಟ್ಟು, ಕೊನೆ ಕ್ಷಣದಲ್ಲಿ ಬಿಗ್ ಶಾಕ್ ಕೊಟ್ಟ ಅಮೆರಿಕಾ..!

SCROLL FOR NEXT