ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ದಂಪತಿಯ ಖಾಸಗಿ ದೃಶ್ಯಗಳನ್ನು ವಿಡಿಯೋ ಮಾಡಿ ಸಿಕ್ಕಿಹಾಕಿಕೊಂಡ ಎಸ್ ಐ

ಸಂಚಾರ ಠಾಣೆ ಎಎಸ್‌ಐ ಒಬ್ಬರು ದಂಪತಿಯ ಖಾಸಗಿ ದೃಶ್ಯಗಳನ್ನು ವಿಡಿಯೋ ಮಾಡಿರುವುದಕ್ಕೆ ಸಾಕ್ಷ್ಯಗಳು ಸಿಕ್ಕಿದರೂ, ಪೊಲೀಸ್‌ ಇಲಾಖೆ ನಡೆದುಕೊಂಡ ರೀತಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. 

ಚಿಕ್ಕಮಗಳೂರು: ಸಂಚಾರ ಠಾಣೆ ಎಎಸ್‌ಐ ಒಬ್ಬರು ದಂಪತಿಯ ಖಾಸಗಿ ದೃಶ್ಯಗಳನ್ನು ವಿಡಿಯೋ ಮಾಡಿರುವುದಕ್ಕೆ ಸಾಕ್ಷ್ಯಗಳು ಸಿಕ್ಕಿದರೂ, ಪೊಲೀಸ್‌ ಇಲಾಖೆ ನಡೆದುಕೊಂಡ ರೀತಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. 

ನಗರದ ಸಂಚಾರಿ ಪೊಲೀಸ್ ಠಾಣೆಯ ಸಹಾಯಕ ಇನ್ಸ್ ಪೆಕ್ಟರ್ ಯತೀಶ್ ಎಂಬುವರು ಜಯನಗರ ಬಡಾವಣೆಯಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರ ಮನೆಯ  ಕಿಟಕಿ ಬಳಿ ನಿಂತು ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದನ್ನು ಕೆಲ ಯುವಕರು ಪ್ರಶ್ನಿಸಿದ್ದಕ್ಕೆ ಪೊಲೀಸರು ಬಂಧಿಸಿದ್ದಾರೆ.

ದಂಪತಿ ಮತ್ತು ಸ್ಥಳೀಯರು ಹೇಳುವ ಪ್ರಕಾರ, ಎಎಸ್‌ಐ ಯತೀಶ್‌ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ ಕೆಲವು ವಿಡಿಯೋಗಳನ್ನು ಪೊಲೀಸರು ಡಿಲೀಟ್‌ ಮಾಡಿದ್ದಾರೆ.  ಎಎಸ್‌ಐ ಯತೀಶ್‌ ತಪ್ಪು ಮಾಡಿದ್ದರೂ ಆತನ ವಿರುದ್ಧ ಕಾನೂನು ಕ್ರಮ ಜರುಗಿಸದೆ, ಪ್ರಶ್ನಿಸಿದ ಸ್ಥಳೀಯ ಯುವಕರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿ ಜೈಲಿಗೆ ಕಳಿಸಲಾಗಿದೆ. ಆದರೆ, ಯಾವ ಕಾರಣಕ್ಕೆ ಯುವಕರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ ಎಂಬುದಾಗಿ ಸ್ಥಳೀಯ ನಿವಾಸಿಗಳು ಆಕ್ಷೇಪವೆತ್ತಿದ್ದಾರೆ. 

ವಿನೋದ್, ಸುಧೀರ್, ವಸಂತ್ ಕುಮಾರ್ ಮತ್ತು ಅನಿಲ್ ಎಂಬುವರು ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ,  ಅವರ ವಿರುದ್ದ ಕೊಲೆಯತ್ನ ನಡೆದಿದೆ ಎಂದು ದೂರಿದ್ದಾರೆ,  ಸದ್ಯ ಎಸ್ ಐ ಪ್ರಜ್ಞಾ ಹೀನರಾಗಿದ್ದು, ಅವರಿಗೆ ಪ್ರಜ್ಞೆ ಬಂದ ಬಳಿಕ ಹೇಳಿಕೆ ಪಡೆಯುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ ಯತೀಶ್  ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯತೀಶ್ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಎಸ್ ಪಿ ಹರೀಶ್ ಪಾಂಡೆ ಭರವಸೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT