ರಾಜ್ಯ

ಲಾರಿಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ; ಚಾಲಕ ಸಾವು, ಆರು ಮಂದಿಗೆ ಗಾಯ

Shilpa D

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕಪಿಲೆ‌ ಹಟ್ಟಿ ಗ್ರಾಮದಲ್ಲಿ ನಡೆದಿದೆ.

ಕಲಬುರಗಿಯಿಂದ ಬೆಂಗಳೂರು ಕಡೆಗೆ ಬಸ್ ತೆರಳುತ್ತಿದ್ದ ವೇಳೆ ಬಸ್ ಚಾಲಕ, ಹರ್ತಿಕೋಟೆ ಗ್ರಾಮದ ಬಳಿ‌ ನಿಂತಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ್ದಾನೆ. ಹೊಡೆತದ ರಭಸಕ್ಕೆ ಚಾಲಕ ಪ್ರೇಮ್ ನಾಥ್ (53) ಮೃತಪಟ್ಟಿದ್ದಾರೆ. ಮೃತ ಚಾಲಕ ಕಲಬುರಗಿ ಮೂಲದವರು ಎಂದು ತಿಳಿದು ಬಂದಿದೆ. 

ಘಟನೆಯಲ್ಲಿ ಬಸ್ಸಿನಲ್ಲಿದ್ದ 6 ಜನರಿಗೆ ಗಾಯಗಳಾಗಿದ್ದು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT