ರಾಜ್ಯ

ಬೇಲಿಕೇರಿ ಅದಿರು ರಫ್ತು ಪ್ರಕರಣ: ಮಾಜಿ ಶಾಸಕ ಅನಿಲ್ ಲಾಡ್'ಗೆ ಜಾಮೀನು ನಕಾರ

Manjula VN

ಬೆಂಗಳೂರು: ಬೇಲಿಕೇರಿ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಅನಿಲ್ ಲಾಡ್'ಗೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಲು ನಿರಾಕರಿಸಿದೆ. 

ಬೇಲೇಕೇರಿ ಬಂದರಿನಿಂದ ಪರವಾನಗಿ ಇಲ್ಲದೆ 50 ಸಾವಿರ ಮೆಟ್ರಿಕ್‌ ಟನ್‌ ಕಬ್ಬಿಣದ ಅದಿರು ರಫ್ತು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿ ಕಾಂಗ್ರೆಸ್ ನಾಯಕ ಅನಿಲ್ ಎಚ್.ಲಾಡ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. 

ಅರ್ಜಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ಪ್ರಕಟಿಸಿತು.

SCROLL FOR NEXT