ಕಂದಾಯ‌ ಸಚಿವ ಆರ್.ಅಶೋಕ್ 
ರಾಜ್ಯ

ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿರುವುದು ನಾಚಿಕೆಗೇಡು: ಕಂದಾಯ ಸಚಿವ ಆರ್.ಅಶೋಕ್

ಸ್ವಾಮಿಜಿಗಳ ಫೋನ್‌‌ ಟ್ಯಾಪ್ ಮಾಡಿಸಿರುವುದು ನಾಚಿಗೇಡಿನ ವಿಚಾರ ಎಂದು ಕಂದಾಯ‌ ಸಚಿವ ಆರ್.ಅಶೋಕ್ ಅವರು ಶುಕ್ರವಾರ ಕಿಡಿಕಾರಿದ್ದಾರೆ. 

ಬೆಂಗಳೂರು: ಸ್ವಾಮಿಜಿಗಳ ಫೋನ್‌‌ ಟ್ಯಾಪ್ ಮಾಡಿಸಿರುವುದು ನಾಚಿಗೇಡಿನ ವಿಚಾರ ಎಂದು ಕಂದಾಯ‌ ಸಚಿವ ಆರ್.ಅಶೋಕ್ ಅವರು ಶುಕ್ರವಾರ ಕಿಡಿಕಾರಿದ್ದಾರೆ. 

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳ ದೂರವಾಣಿ ಕದ್ದಾಲಿಕೆ ಏಕೆ‌ ಮಾಡಿದ್ದಾರೆ? ಎಂಬುದು ತನಿಖೆಯಲ್ಲಿ ಎಲ್ಲವೂ ಹೊರ ಬರಲಿ. ಸ್ವಾಮೀಜಿಗಳನ್ನು ರಾಜಕೀಯ ವ್ಯವಸ್ಥೆಗೆ ತರುವುದು ಎಷ್ಟು ಸರಿ? ದೇಶ ದ್ರೋಹಿ ಸಂಘಟನೆಗಳು, ಭಯೋತ್ಪಾದಕರ ದೂರವಾಣಿ ಕದ್ದಾಲಿಕೆ ಮಾಡಲು‌ ಅವಕಾಶ ಇದೆ‌. ಸ್ವಾಮಿಜಿಗಳದ್ದು ದೂರವಾಣಿ ಕದ್ದಾಲಿಕೆ ಏಕೆ‌ ಮಾಡಲಾಗಿದೆ? ಎಂದು ಅವರು ಕಿಡಿಕಾರಿದ್ದಾರೆ. 

ಬ್ರಿಟೀಷರ ಕಾಲದಿಂದಲೂ ಟೆಲಿಫೋನ್ ಕದ್ದಾಲಿಕೆ ಮಾಡುವುದು ದೊಡ್ಡ ಅಪರಾಧವಾಗಿದೆ. ಯಾರು ಏನೇ ಹೇಳಿದರೂ, ಟೆಲಿಫೋನ್ ಕದ್ದಾಲಿಕೆ ಮಾಡಿರುವುದು ಸತ್ಯ. ಇದಕ್ಕೆ ಸಾಕ್ಷ್ಯ ಎಂಬಂತೆ ಹಲವಾರು ನಿದರ್ಶನಗಳು ಈಗಾಗಲೇ ಮಾಧ್ಯಮಗಳಲ್ಲಿ ಬಂದಿವೆ. ರಾಜಕೀಯ ನಾಯಕರ ಫೋನ್ ಕದ್ದಾಲಿಕೆ ಮಾಡಿರಬಹುದು. ಆದರೆ, ಆದಿಚುಂಚನಗಿರಿಯ ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಯಾವ ಕಾರಣಕ್ಕೆ ಕದ್ದಾರಿಯೆ ಮಾಡಿದ್ದಾರೆ. ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿರುವುದು ಸಾಕಷ್ಟು ನೋವನ್ನು ತರಿಸಿದೆ. ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿರುವವರಿಗೆ ನಾಚಿಕೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT