ಕಂದಾಯ‌ ಸಚಿವ ಆರ್.ಅಶೋಕ್ 
ರಾಜ್ಯ

ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿರುವುದು ನಾಚಿಕೆಗೇಡು: ಕಂದಾಯ ಸಚಿವ ಆರ್.ಅಶೋಕ್

ಸ್ವಾಮಿಜಿಗಳ ಫೋನ್‌‌ ಟ್ಯಾಪ್ ಮಾಡಿಸಿರುವುದು ನಾಚಿಗೇಡಿನ ವಿಚಾರ ಎಂದು ಕಂದಾಯ‌ ಸಚಿವ ಆರ್.ಅಶೋಕ್ ಅವರು ಶುಕ್ರವಾರ ಕಿಡಿಕಾರಿದ್ದಾರೆ. 

ಬೆಂಗಳೂರು: ಸ್ವಾಮಿಜಿಗಳ ಫೋನ್‌‌ ಟ್ಯಾಪ್ ಮಾಡಿಸಿರುವುದು ನಾಚಿಗೇಡಿನ ವಿಚಾರ ಎಂದು ಕಂದಾಯ‌ ಸಚಿವ ಆರ್.ಅಶೋಕ್ ಅವರು ಶುಕ್ರವಾರ ಕಿಡಿಕಾರಿದ್ದಾರೆ. 

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳ ದೂರವಾಣಿ ಕದ್ದಾಲಿಕೆ ಏಕೆ‌ ಮಾಡಿದ್ದಾರೆ? ಎಂಬುದು ತನಿಖೆಯಲ್ಲಿ ಎಲ್ಲವೂ ಹೊರ ಬರಲಿ. ಸ್ವಾಮೀಜಿಗಳನ್ನು ರಾಜಕೀಯ ವ್ಯವಸ್ಥೆಗೆ ತರುವುದು ಎಷ್ಟು ಸರಿ? ದೇಶ ದ್ರೋಹಿ ಸಂಘಟನೆಗಳು, ಭಯೋತ್ಪಾದಕರ ದೂರವಾಣಿ ಕದ್ದಾಲಿಕೆ ಮಾಡಲು‌ ಅವಕಾಶ ಇದೆ‌. ಸ್ವಾಮಿಜಿಗಳದ್ದು ದೂರವಾಣಿ ಕದ್ದಾಲಿಕೆ ಏಕೆ‌ ಮಾಡಲಾಗಿದೆ? ಎಂದು ಅವರು ಕಿಡಿಕಾರಿದ್ದಾರೆ. 

ಬ್ರಿಟೀಷರ ಕಾಲದಿಂದಲೂ ಟೆಲಿಫೋನ್ ಕದ್ದಾಲಿಕೆ ಮಾಡುವುದು ದೊಡ್ಡ ಅಪರಾಧವಾಗಿದೆ. ಯಾರು ಏನೇ ಹೇಳಿದರೂ, ಟೆಲಿಫೋನ್ ಕದ್ದಾಲಿಕೆ ಮಾಡಿರುವುದು ಸತ್ಯ. ಇದಕ್ಕೆ ಸಾಕ್ಷ್ಯ ಎಂಬಂತೆ ಹಲವಾರು ನಿದರ್ಶನಗಳು ಈಗಾಗಲೇ ಮಾಧ್ಯಮಗಳಲ್ಲಿ ಬಂದಿವೆ. ರಾಜಕೀಯ ನಾಯಕರ ಫೋನ್ ಕದ್ದಾಲಿಕೆ ಮಾಡಿರಬಹುದು. ಆದರೆ, ಆದಿಚುಂಚನಗಿರಿಯ ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಯಾವ ಕಾರಣಕ್ಕೆ ಕದ್ದಾರಿಯೆ ಮಾಡಿದ್ದಾರೆ. ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿರುವುದು ಸಾಕಷ್ಟು ನೋವನ್ನು ತರಿಸಿದೆ. ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿರುವವರಿಗೆ ನಾಚಿಕೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT