ಸಾಂದರ್ಭಿಕ ಚಿತ್ರ 
ರಾಜ್ಯ

6 ಮತ್ತು 8ನೇ ತರಗತಿಯಿಂದಲೇ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಚಿಂತನೆ

10ನೇ ತರಗತಿವರೆಗೂ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸದೆ ಪಾಸ್‌ ಮಾಡುವ ಪದ್ಧತಿಯನ್ನು ತೆಗೆದುಹಾಕುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಕಲಬುರಗಿ: 10ನೇ ತರಗತಿವರೆಗೂ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸದೆ ಪಾಸ್‌ ಮಾಡುವ ಪದ್ಧತಿಯನ್ನು ತೆಗೆದುಹಾಕುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಅವರು, 6 ಮತ್ತು 8ನೇ ತರಗತಿಯಿಂದಲೇ ಪಬ್ಲಿಕ್ ಪರೀಕ್ಷೆಯ ಅನುಭವವಾಗಲಿ ಎಂಬ ಉದ್ದೇಶದಿಂದ ಪರೀಕ್ಷೆಯಲ್ಲಿ ಬದಲಾವಣೆ ತರಲು ಚಿಂತಿಸಲಾಗುತ್ತಿದೆ. ಎಂದರು.

1ನೇ ತರಗತಿಯಿಂದ 10ನೇ ತರಗತಿಯವರೆಗೆ ಮಕ್ಕಳು ಯಾವುದೇ ಪರೀಕ್ಷೆ ಎದುರಿಸದೇ, ನೇರವಾಗಿ 10ನೇ ತರಗತಿಗೆ ಬಂದು ಪರೀಕ್ಷೆ ಬರೆಯವುದರಿಂದ ಭಯದಿಂದಾಗಿ ಮಕ್ಕಳು ಫೇಲ್ ಆಗುವ ಸಾಧ್ಯತೆಗಳು ಹೆಚ್ಚಿರುತ್ತದೆ. ವಿದ್ಯಾರ್ಥಿಗಳನ್ನು ಫೇಲ್ ಮಾಡುವ ಉದ್ದೇಶ ಇದಲ್ಲ. ಆದರೆ ಅವರಿಗೆ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸುವ ಆತ್ಮವಿಶ್ವಾಸ ಹುಟ್ಟಲಿ ಎಂಬ ಕಾರಣಕ್ಕೆ ಈ ಚಿಂತನೆ ನಡೆದಿದೆ ಎಂದರು.

ರಾಜ್ಯದಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ ಯಾವುದೇ ಇರಲಿ ಎಲ್ಲಾ ಶಾಲಾಮಕ್ಕಳಿಗೂ ವಿಮಾ ಸೌಲಭ್ಯ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತೇನೆ ಎಂದು ತಿಳಿಸಿದರು. ಅಲ್ಲದೆ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನ ಬಿಸಿ ಊಟವನ್ನು ವಿಸ್ತರಿಸುವ ಚಿಂತನೆ ನಡೆದಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT