ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು ದಸರಾಗೆ ಆಗಮಿಸುವ ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಹೊರ ರಾಜ್ಯಗಳ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದರೆ.

ಮೈಸೂರು: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಹೊರ ರಾಜ್ಯಗಳ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದರೆ.

ಸೆಪ್ಟೆಂಬರ್ 29ರಿಂದ ಅಕ್ಟೋಬರ್ 9ರ ತನಕ ಮೈಸೂರು ಪ್ರವೇಶಿಸುವ ಹೊರ ರಾಜ್ಯಗಳ ವಾಹನಗಳಿಗೆ ತೆರಿಗೆ ಕಟ್ಟುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕ ಮೋಟಾರು ವಾಹನ ತೆರಿಗೆ ಅಧಿನಿಯಮ 1957 (ಕರ್ನಾಟಕ ಕಾಯಿದೆ 35/1957) ಕಲಂ 16 (1) ರ ಅಡಿಯಲ್ಲಿಸಾರ್ವಜನಿಕರ ಹಿತದೃಷ್ಟಿಯಿಂದ ಕರ್ನಾಟಕ ಹೊರತುಪಡಿಸಿ ಇತರೆ ರಾಜ್ಯಗಳಲ್ಲಿ ನೋಂದಾಯಿತ ಮತ್ತು ಆ ರಾಜ್ಯಗಳಲ್ಲಿ ತೆರಿಗೆ ಪಾವತಿಸಿರುವ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲು ಸರ್ಕಾರ ತೀರ್ಮಾನಿಸಿದೆ.

ಇತರೆ ರಾಜ್ಯದ ವಾಹನಗಳು ಮೋಟಾರು ವಾಹನ ಕಾಯಿದೆ 1988ರ ಸೆಕ್ಷನ್‌ 88ರ ಸಬ್‌ ಸೆಕ್ಷನ್‌ 8ರ (ಕೇಂದ್ರ ಕಾಯಿದೆ 59/88) ಅನುಸಾರ ವಿಶೇಷ ರಹದಾರಿ ಪಡೆದು ಸೆ.29ರಿಂದ ಅ.9ರವರೆಗೆ ಕರ್ನಾಟಕ ರಾಜ್ಯದ ಮೈಸೂರು ಜಿಲ್ಲೆಗೆ ಮಾತ್ರ ಅನ್ವಯಿಸುವಂತೆ ದಸರಾ ಪ್ರಯುಕ್ತ ಹೊರ ರಾಜ್ಯಗಳಿಂದ ಆಗಮಿಸುವ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT