ಟಿಕ್ ಟಾಕ್ 
ರಾಜ್ಯ

ಬೆಂಗಳೂರು: ರೈಲ್ವೆ ಹಳಿ ಮೇಲೆ ಟಿಕ್‌ ಟಾಕ್‌ ವಿಡಿಯೋ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು

ಟಿಕ್ ಟಾಕ್ ವಿಡಿಯೋ ಹುಚ್ಚಿನಿಂದಾಗಿ ದೇಶ-ವಿದೇಶಗಳಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದು, ಶುಕ್ರವಾರ ಬೆಂಗಳೂರಿನಲ್ಲೂ ಇಬ್ಬರು ಯುವಕರ ರೈಲ್ವೆ ಹಳಿ ಮೇಲೆ ಟಿಕ್ ಟಾಕ್ ವಿಡಿಯೋ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.

ಬೆಂಗಳೂರು: ಟಿಕ್ ಟಾಕ್ ವಿಡಿಯೋ ಹುಚ್ಚಿನಿಂದಾಗಿ ದೇಶ-ವಿದೇಶಗಳಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದು, ಶುಕ್ರವಾರ ಬೆಂಗಳೂರಿನಲ್ಲೂ ಇಬ್ಬರು ಯುವಕರ ರೈಲ್ವೆ ಹಳಿ ಮೇಲೆ ಟಿಕ್ ಟಾಕ್ ವಿಡಿಯೋ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ವಿಡಿಯೋ ಮಾಡುತ್ತಿದ್ದ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಸಂಜೆ ಯಲಹಂಕ ಮತ್ತು ಚನ್ನಸಂದ್ರ ನಡುವೆ ಶ್ರೀರಾಮಪುರ ರೈಲ್ವೆ ಗೇಟ್‌ ಬಳಿ ರೈಲ್ವೆ ಹಳಿ ಮೇಲೆ ಟಿಕ್‌ ಟಾಕ್‌ ವಿಡಿಯೋ ಸಾಹಸ ಮಾಡುವಾಗ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಮೃತ ಯುವಕರನ್ನು ಹೆಗಡೆ ನಗರ ನಿವಾಸಿ, ಫುಡ್‌ ಡೆಲಿವರಿ ಕೊಡುವ ಕೆಲಸ ಮಾಡುತ್ತಿದ್ದ ಅಫ್ತಾಬ್‌ ಶರೀಫ್‌(19) ಮತ್ತು ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದ ಮೊಹಮ್ಮದ್‌ ಮತೀನ್‌(23) ಎಂದು ಗುರುತಿಸಲಾಗಿದೆ. ಜಬೀವುಲ್ಲಾ(21) ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ಬೊರಲಿಂಗಯ್ಯ ಅವರು ತಿಳಿಸಿದ್ದಾರೆ.

ಶುಕ್ರವಾರ ಸಂಜೆ 5.30ರಿಂದ 6 ಗಂಟೆ ನಡುವೆ ಈ ಮೂವರು ಟಿಕ್‌ಟಾಕ್‌ ವಿಡಿಯೋ ಮಾಡಲು ರೈಲ್ವೆ ಹಳಿ ಮೇಲೆ ಹೋಗಿದ್ದರು. ಹಳಿ ಮೇಲೆ ನಿಂತು, ರೈಲು ಬರುವ ಸಂದರ್ಭದಲ್ಲಿ ಹೊರಗೆ ಜಿಗಿಯಬೇಕು ಎಂಬ ಪ್ಲಾನ್‌ ಮಾಡಿದ್ದರು.

ಕೋಲಾರ-ಬೆಂಗಳೂರು ಪ್ಯಾಸೆಂಜರ್‌ ರೈಲು ಯಲಹಂಕ ನಿಲ್ದಾಣದಿಂದ ನಗರದ ಕಡೆ ಬರುತ್ತಿತ್ತು. ಯುವಕರು ಹೊರಗೆ ಜಂಪ್‌ ಹೊಡೆಯುವಷ್ಟರಲ್ಲಿ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಯುವಕರು ಹಳಿಯಿಂದ ಸಾಕಷ್ಟು ದೂರಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬನಿಗೆ ಗಂಭೀರ ಗಾಯಗಳಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!