ಟಿಕ್ ಟಾಕ್ 
ರಾಜ್ಯ

ಬೆಂಗಳೂರು: ರೈಲ್ವೆ ಹಳಿ ಮೇಲೆ ಟಿಕ್‌ ಟಾಕ್‌ ವಿಡಿಯೋ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು

ಟಿಕ್ ಟಾಕ್ ವಿಡಿಯೋ ಹುಚ್ಚಿನಿಂದಾಗಿ ದೇಶ-ವಿದೇಶಗಳಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದು, ಶುಕ್ರವಾರ ಬೆಂಗಳೂರಿನಲ್ಲೂ ಇಬ್ಬರು ಯುವಕರ ರೈಲ್ವೆ ಹಳಿ ಮೇಲೆ ಟಿಕ್ ಟಾಕ್ ವಿಡಿಯೋ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.

ಬೆಂಗಳೂರು: ಟಿಕ್ ಟಾಕ್ ವಿಡಿಯೋ ಹುಚ್ಚಿನಿಂದಾಗಿ ದೇಶ-ವಿದೇಶಗಳಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದು, ಶುಕ್ರವಾರ ಬೆಂಗಳೂರಿನಲ್ಲೂ ಇಬ್ಬರು ಯುವಕರ ರೈಲ್ವೆ ಹಳಿ ಮೇಲೆ ಟಿಕ್ ಟಾಕ್ ವಿಡಿಯೋ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ವಿಡಿಯೋ ಮಾಡುತ್ತಿದ್ದ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಸಂಜೆ ಯಲಹಂಕ ಮತ್ತು ಚನ್ನಸಂದ್ರ ನಡುವೆ ಶ್ರೀರಾಮಪುರ ರೈಲ್ವೆ ಗೇಟ್‌ ಬಳಿ ರೈಲ್ವೆ ಹಳಿ ಮೇಲೆ ಟಿಕ್‌ ಟಾಕ್‌ ವಿಡಿಯೋ ಸಾಹಸ ಮಾಡುವಾಗ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಮೃತ ಯುವಕರನ್ನು ಹೆಗಡೆ ನಗರ ನಿವಾಸಿ, ಫುಡ್‌ ಡೆಲಿವರಿ ಕೊಡುವ ಕೆಲಸ ಮಾಡುತ್ತಿದ್ದ ಅಫ್ತಾಬ್‌ ಶರೀಫ್‌(19) ಮತ್ತು ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದ ಮೊಹಮ್ಮದ್‌ ಮತೀನ್‌(23) ಎಂದು ಗುರುತಿಸಲಾಗಿದೆ. ಜಬೀವುಲ್ಲಾ(21) ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ಬೊರಲಿಂಗಯ್ಯ ಅವರು ತಿಳಿಸಿದ್ದಾರೆ.

ಶುಕ್ರವಾರ ಸಂಜೆ 5.30ರಿಂದ 6 ಗಂಟೆ ನಡುವೆ ಈ ಮೂವರು ಟಿಕ್‌ಟಾಕ್‌ ವಿಡಿಯೋ ಮಾಡಲು ರೈಲ್ವೆ ಹಳಿ ಮೇಲೆ ಹೋಗಿದ್ದರು. ಹಳಿ ಮೇಲೆ ನಿಂತು, ರೈಲು ಬರುವ ಸಂದರ್ಭದಲ್ಲಿ ಹೊರಗೆ ಜಿಗಿಯಬೇಕು ಎಂಬ ಪ್ಲಾನ್‌ ಮಾಡಿದ್ದರು.

ಕೋಲಾರ-ಬೆಂಗಳೂರು ಪ್ಯಾಸೆಂಜರ್‌ ರೈಲು ಯಲಹಂಕ ನಿಲ್ದಾಣದಿಂದ ನಗರದ ಕಡೆ ಬರುತ್ತಿತ್ತು. ಯುವಕರು ಹೊರಗೆ ಜಂಪ್‌ ಹೊಡೆಯುವಷ್ಟರಲ್ಲಿ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಯುವಕರು ಹಳಿಯಿಂದ ಸಾಕಷ್ಟು ದೂರಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬನಿಗೆ ಗಂಭೀರ ಗಾಯಗಳಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT