ಸಂಗ್ರಹ ಚಿತ್ರ 
ರಾಜ್ಯ

ನವರಾತ್ರಿ ಆರಂಭ: ಮೈಸೂರಿನಲ್ಲಿ ಕಳೆಕಟ್ಟಿದ ಸಂಭ್ರಮ

ರಾಜ್ಯದಾದ್ಯಂತ ನವರಾತ್ರಿ ಆಚರಣೆ ಆರಂಭಗೊಂಡಿದ್ದು, ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಕಟ್ಟಿದೆ. ಭಾನುವಾರ ಬೆಳಿಗ್ಗೆ 9.39ರಿಂದ 10.25ರೊಳಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸರಸ್ವತಿ ಸಮ್ಮಾನ್ ಪುರಸ್ಕೃತ ಹಿರಿಯ...

ಮೈಸೂರು: ರಾಜ್ಯದಾದ್ಯಂತ ನವರಾತ್ರಿ ಆಚರಣೆ ಆರಂಭಗೊಂಡಿದ್ದು, ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಕಟ್ಟಿದೆ. ಭಾನುವಾರ ಬೆಳಿಗ್ಗೆ 9.39ರಿಂದ 10.25ರೊಳಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸರಸ್ವತಿ ಸಮ್ಮಾನ್ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. 

ನಾಡಹಬ್ಬ ಚಾಲನೆ ವೇಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದರು, ಶಾಸಕರು ಹಾಗೂ ಸಚಿವರು ಉಪಸ್ಥಿತರಿರಲಿದ್ದಾರೆ. 

ನವರಾತ್ರಿ ಹಿನ್ನೆಲೆಯಲ್ಲಿ ನಾಡಿನ ಪ್ರಸಿದ್ಧ ದೇವಾಲಯಗಳಾದ ಶೃಂಗೇರಿ, ಕೊಲ್ಲೂರು, ಶಿರಸಿ, ಬನಶಂಕರಿ ಸೇರಿದಂತೆ ಶಕ್ತಿ ದೇವತೆಯ ದೇವಾಲಯಗಳಲ್ಲಿ ದೇವಿಯ ಆರಾಧನೆ, ವಿಶೇಷ ಪೂಜೆ, ಪಾರಾಯಣಗಳು, ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 

ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಅರಮನೆ ಆವರಣದಲ್ಲಿ ಬನ್ನಿ ಪೂಜೆ ನೆರವೇರಿಸಿ, ಬೆಳಿಗ್ಗೆ 9.45ಕ್ಕೆ ರತ್ನ ಖಚಿತ ಸಿಂಹಾಸನವನ್ನೇರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT