ಸದಾನಂದಗೌಡ 
ರಾಜ್ಯ

ದಸರಾ ಉತ್ಸವ; ಕೇಂದ್ರ ಸಚಿವ ಸದಾನಂದಗೌಡರನ್ನು ತಡೆದ ಭದ್ರತಾ ಸಿಬ್ಬಂದಿ

ಮೈಸೂರಿನ ಜಗತ್ ವಿಖ್ಯಾತ ದಸರಾ ಉತ್ಸವಕ್ಕೆ ಆಗಮಿಸಿದ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರು ಮುಜುಗರಕ್ಕೀಡಾಗುವ ಸನ್ನಿವೇಶ ಎದುರಾಯಿತು.

ಮೈಸೂರು: ಮೈಸೂರಿನ ಜಗತ್ ವಿಖ್ಯಾತ ದಸರಾ ಉತ್ಸವಕ್ಕೆ ಆಗಮಿಸಿದ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರು ಮುಜುಗರಕ್ಕೀಡಾಗುವ ಸನ್ನಿವೇಶ ಎದುರಾಯಿತು.

ಭಾನುವಾರ ಉದ್ಘಾಟನಾ ಕಾರ್ಯಕ್ರಮಕ್ಕೆ ಸದಾನಂದಗೌಡ ಅವರು ಸ್ವಲ್ಪ ತಡವಾಗಿ ಆಗಮಿಸಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಗಲೇ ವೇದಿಕೆಯಲ್ಲಿದ್ದರು. ಆದ್ದರಿಂದ ತರಾತುರಿಯಲ್ಲಿ ವೇದಿಕೆಯತ್ತ ಸಾಗುತ್ತಿದ್ದ ಸಚಿವರನ್ನು ಭದ್ರತಾ ಸಿಬ್ಬಂದಿ ತಡೆದು ನಿಲ್ಲಿಸಿದರು. ಇದು ಇಬ್ಬರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.

ನಂತರ, ಪೊಲೀಸ್ ಅಧಿಕಾರಿಗಳು ಅವರನ್ನು ಗಮನಿಸಿ ವೇದಿಕೆಗೆ ಕರೆದೊಯ್ದರಾದರೂ, ಘಟನೆಯಿಂದ ಬೇಸರಗೊಂಡ ಸದಾನಂದ ಗೌಡ ಅವರು ಕಾರ್ಯಕ್ರಮದ ಮಧ್ಯದಲ್ಲೇ ತೆರಳಿದರು ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ, ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರು ದಸರಾ ಉತ್ಸವವನ್ನು ಉದ್ಘಾಟಿಸಿದರು.

ಮುಂದಿನ ಒಂಬತ್ತು ದಿನಗಳ ಕಾಲ ನಡೆಯಲಿರುವ ವಿಜೃಂಬಣೆಯ ಜಂಬೂ ಸವಾರಿ ವಿಜಯದಶಮಿಯಂದು ಕೊನೆಗೊಳ್ಳಲಿದ್ದು, ಇದಕ್ಕೆ ಲಕ್ಷಾಂತರ ಜನರು ಸಾಕ್ಷಿಯಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT