ಎಚ್.ಡಿ.ಕುಮಾರಸ್ವಾಮಿ 
ರಾಜ್ಯ

ಫೋನ್ ಟ್ಯಾಪಿಂಗ್: ಸ್ವಾಮಿಗಳ ಬಗೆಗೆ ಅನುಮಾನ ಪಟ್ಟಿಲ್ಲ, ವರದಿಯಿಂದ ನೋವಾಗಿದೆ- ಕುಮಾರಸ್ವಾಮಿ

ತಮ್ಮ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಯ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ರಾಜಕೀಯ ನಾಯಕರ ಹೇಳಿಕೆಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು:  ತಮ್ಮ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಯ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ರಾಜಕೀಯ ನಾಯಕರ ಹೇಳಿಕೆಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಆದಿ ಚುಂಚನಗಿರಿ ಸ್ವಾಮೀಜಿಯ ಫೋನ್ ಟ್ಯಾಪಿಂಗ್ ಕುರಿತ ವರದಿಗಳು ಮತ್ತು ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ‌ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದ್ದರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದ್ದರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ ಎಂದು ಸಮರ್ಥನೆ ನೀಡಿದ್ದಾರೆ.

ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಸಚಿವ ಅಶೋಕ ಅವರು ಎಲ್ಲರಿಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರಕ್ಕೆ ಅತೀವ ನೋವಿದೆ ಎಂದು ಟ್ವೀಟ್ ನಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಲೋಕಭವನಕ್ಕೆ ಆಗಮಿಸಿದ ಸಿದ್ದರಾಮಯ್ಯ, ಶೀಘ್ರದಲ್ಲೇ ರಾಜೀನಾಮೆ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT