ಸಾಂದರ್ಭಿಕ ಚಿತ್ರ 
ರಾಜ್ಯ

ಮದ್ಯಪಾನ ಮಾಡಿ ವಾಹನ ಚಾಲನೆ ಮೇಲಿನ ದಂಡದ ಮೊತ್ತ ಕಡಿಮೆ ಮಾಡಿ: ಹೊಟೇಲ್ ಮಾಲೀಕರ ಸಂಘ ಒತ್ತಾಯ

ರಾಜ್ಯದ ಪ್ರವಾಸೋದ್ಯಮ ನೀತಿ 2020ಕ್ಕೆ ಮುಗಿಯಲಿದ್ದು, 2020 - 2025ರ ಅವಧಿಯ ಪ್ರವಾಸೋದ್ಯಮ ನೀತಿಯಲ್ಲಿ ಪ್ರವಾಸಿಗರು ಮತ್ತು ಪ್ರವಾಸೋದ್ಯಮ ಹೋಟಲ್ ಉದ್ಯಮಕ್ಕೆ ಸಹಾಯವಾಗುವಂತೆ ಹಣಕಾಸು...

ಬೆಳಗಾವಿ: ರಾಜ್ಯದ ಪ್ರವಾಸೋದ್ಯಮ ನೀತಿ 2020ಕ್ಕೆ ಮುಗಿಯಲಿದ್ದು, 2020 - 2025ರ ಅವಧಿಯ ಪ್ರವಾಸೋದ್ಯಮ ನೀತಿಯಲ್ಲಿ ಪ್ರವಾಸಿಗರು ಮತ್ತು ಪ್ರವಾಸೋದ್ಯಮ ಹೋಟಲ್ ಉದ್ಯಮಕ್ಕೆ ಸಹಾಯವಾಗುವಂತೆ ಹಣಕಾಸು ಮತ್ತು ಪ್ರೋತ್ಸಾಹ ಧನ ಹೆಚ್ಚಿಸುವಂತೆ ಜಿಲ್ಲಾ ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಉಮೇಳ ಬಾಳಿ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರ ಆಚರಿಸುವ ಹಬ್ಬ ಹಾಗೂ ಜಯಂತಿಗಳ ಸಂದರ್ಭಗಳಲ್ಲಿ, ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ 25 ರಿಂದ 30 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ಇದರಿಂದ ಹೋಟೆಲ್ ಉದ್ಯಮ ನಷ್ಟ ಅನುಭವಿಸುತ್ತಿದೆ ಎಂದರು.

ರಾಜ್ಯದ ಬಹುತೇಕ ಭಾಗಗಳಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದಾಗಿ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದ್ದು,  ಪ್ರವಾಸಿ ಹೋಟೆಲ್‌ಗಳು ಕೋಟಿ ಕೋಟಿ ಬಂಡವಾಳ ಹೂಡಿ ನಷ್ಟ ಅನುಭವಿಸಬೇಕಾಗಿದೆ. ಉದ್ಯೋಗ ಸೃಷ್ಟಿಸುವ ಹೋಟೆಲ್ ಉದ್ಯಮವನ್ನು ಗಮನಿಸಿ ರಾಜ್ಯ ಸರಕಾರ ಕೆಲ ರಿಯಾಯಿತಿಗಳನ್ನು ಘೋಷಿಸಿ, ಸಹಾಯದ ಹಸ್ತ ಚಾಚಬೇಕು ಎಂದರು.

ಜಿಲ್ಲೆಯ ಚಿಲ್ಲರೆ ಅಂಗಡಿಗಳು ನಿಯಮ ಮೀರಿ ಅಂಗಡಿಗಳಲ್ಲಿ ಸೇವೆ ಒದಗಿಸುತ್ತಿವೆ. ಬಾರ್‌ಗಳಲ್ಲಿ ಪಾರ್ಸಲ್ ಸಂಸ್ಕೃತಿ ತೀವ್ರಗೊಂಡಿದ್ದು, ಇದರಿಂದ ಪ್ರವಾಸೋದ್ಯಮ ಹೋಟಲ್‌ಗಳಿಗೆ ನಷ್ಟವಾಗುತ್ತಿವೆ. ಅಬಕಾರಿಯ ಕೆಲ ನಿಯಮಗಳಿಂದ ಈ ಹೋಟೆಲ್‌ಗಳಿಗೆ ವಿನಾಯತಿ ನೀಡಬೇಕು ಎಂದು ಆಗ್ರಹಿಸಿದರು. 

ಬೆಳಗಾವಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಡೆಸುತ್ತಿರುವ ಮಾಂಸಹಾರಿ ಹೋಟೆಲ್‌ಗಳು  ಮತ್ತು ಡಾಬಗಳಲ್ಲಿ ಧಾರಾಳವಾಗಿ ಮದ್ಯ ಸರಬರಾಜು ಮಾಡುತ್ತಿರುವುದಕ್ಕೆ ಕಡಿವಾಣ ಹಾಕಬೇಕು. ಕುಡಿದು ವಾಹನ ಚಾಲನೆ ಮಾಡುವವರ ಮೇಲೆ ದುಬಾರಿ ದಂಡ ವಿಧಿಸುತ್ತಿದ್ದು, ದಂಡದ ಮೊತ್ತವನ್ನು ಕಡಿತಗೊಳಿಸಬೇಕು. ಮದ್ಯ ಮಾರಾಟ ನಿಷೇಧ ದಿನಗಳನ್ನು ಕಡಿಮೆ ಮಾಡದಿದ್ದರೇ, ನ್ಯಾಯಾಲಯದ ಮೊರೆ ಹೋಗುವುದಾಗಿಯೂ ಉಮೇಳ ಬಾಳಿ ತಿಳಿಸಿದರು.
 
ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ರಾಜಶೇಖರ ಕಲಾಲ ಮತ್ತು ಶಿವರಾಜ ಬಸಗುಂಡೆ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT