ರಾಜ್ಯ

ದಾವಣಗೆರೆ: ಮೊಬೈಲ್ ಕಳೆದಿದ್ದಕ್ಕೆ ರೈಲಿಗೆ ತಲೆ ಕೊಟ್ಟ ಯುವಕ

Sumana Upadhyaya

ದಾವಣಗೆರೆ: ಮೊಬೈಲ್ ಕಳೆದಿದ್ದಕ್ಕೆ ಮನೆಯವರು ಬೈಯುತ್ತಾರೆ ಎಂದು ಹೆದರಿ ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ  ಘಟನೆ ನಗರದ  ಡಿಸಿಎಂ ಟೌನ್ ಶಿಪ್ ಬಳಿ ನಡೆದಿದೆ.


ದಾವಣಗೆರೆಯ ನಿಟ್ಟುವಳ್ಳಿಯ ನಿವಾಸಿ 22 ವರ್ಷದ ಸಿದ್ದೇಶ್, ಭಾನುವಾರ ರಾತ್ರಿ ಪಕ್ಕದ ಮನೆಯವರ ಮೊಬೈಲ್ ಪಡೆದುಕೊಂಡಿದ್ದನು. ಆದರೆ , ರಾತ್ರಿಯೇ ಆ ಮೊಬೈಲ್ ಕಳೆದು ಹೋಗಿದೆ. ಈ ವಿಚಾರ ಪಕ್ಕದ ಮನೆಯವರಿಗೆ ತಿಳಿಯುತ್ತಿದಂತೆ ಮೊಬೈಲ್ ವಾಪಸ್ ತಂದುಕೊಡುವಂತೆ ಬೈದಿದ್ದಲ್ಲದೇ, ಆತನ ಮನೆಯವರಿಗೆ ವಿಷಯ ತಿಳಿಸುವುದಾಗಿ ಬೆದರಿಸಿದ್ದರು. 


 ಮೊಬೈಲ್ ಕಳೆದುಕೊಂಡಿರುವ ವಿಚಾರ ಮನೆಯವರಿಗೆ ಗೊತ್ತಾದರೆ ಬೈಯುತ್ತಾರೆ ಎಂದು ಹೆದರಿ ಆತ ಇಂದು ಬೆಳಗ್ಗೆ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.


 ಘಟನಾ ಸ್ಥಳಕ್ಕೆ ಕೆಟಿಜೆ ನಗರ ಹಾಗೂ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ.

SCROLL FOR NEXT