ರಾಜ್ಯ

ಲಾಕ್ ಡೌನ್: ತುರ್ತು ವಿಚಾರಣೆಗೆ ಹೈಕೋರ್ಟ್ ಸುತ್ತೋಲೆ

ಅತ್ಯಂತ ತುರ್ತು ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲು ಜಿಲ್ಲಾ ನ್ಯಾಯಾಲಯಗಳಿಗೆ ದಿನ ಮತ್ತು ಸಮಯ ನಿಗದಿ ಮಾಡಿ ಹೈಕೋರ್ಟ್ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು : ಅತ್ಯಂತ ತುರ್ತು ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲು ಜಿಲ್ಲಾ ನ್ಯಾಯಾಲಯಗಳಿಗೆ ದಿನ ಮತ್ತು ಸಮಯ ನಿಗದಿ ಮಾಡಿ ಹೈಕೋರ್ಟ್ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಎಲ್ಲಾ 30 ಜಿಲ್ಲಾ ನ್ಯಾಯಾಲಯಗಳು ಹಾಗೂ ಸಣ್ಣ ಪ್ರಕರಣಗಳ ವಿಚಾರಣಾ ನ್ಯಾಯಾಲಯಗಳು ಮತ್ತು ಕೌಟುಂಬಿಕ ನ್ಯಾಯಾಲಯಗಳು ಮಂಗಳವಾರ ಮತ್ತು ಶುಕ್ರವಾರ ತುರ್ತು ಪ್ರಕರಣಗಳ ವಿಚಾರಣೆ ನಡೆಸಲಿವೆ. ಈ ಎರಡು ದಿನಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಪ್ರಕರಣಗಳ ವಿಚಾರಣೆ ನಡೆಸಲಿವೆ.

ತುಂಬಾ ಅನಿವಾರ್ಯತೆ ಇದೆ ಎಂಬಂತಹ ಪರಿಸ್ಥಿತಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಗಾಗಿ ವಕೀಲರು ಮತ್ತು ಪಾರ್ಟಿ ಇನ್ ಪರ್ಸನ್ (ಖುದ್ದು ವಾದಿಸುವವರು) ಇ-ಮೇಲ್ ಮೂಲಕ ಆಯಾ ಜಿಲ್ಲಾ ಪ್ರಧಾನ ನ್ಯಾಯಾಧೀಶರಿಗೆ ಮನವಿ ಸಲ್ಲಿಸಬಹುದು. ಜಿಲ್ಲಾ ನ್ಯಾಯಾಧೀಶರು ಮನವಿಯಲ್ಲಿನ ಮಾಹಿತಿ ಮತ್ತು ಅನಿವಾರ್ಯತೆ ಆಧರಿಸಿ ಪ್ರಕರಣ ದಾಖಲಿಸಲು ಅನುಮತಿ ನೀಡುತ್ತಾರೆ. ಆ ಬಳಿಕ ವಕೀಲರು ಅಥವಾ ಪಾರ್ಟಿ ಇನ್ ಪರ್ಸನ್ ಇ-ಫೈಲಿಂಗ್ ಮೂಲಕ ಅರ್ಜಿ ಸಲ್ಲಿಸಬಹುದು. ಅದನ್ನು ಪರಿಗಣಿಸಿ ವಿಚಾರಣೆಯ ದಿನ ಮತ್ತು ಸಮಯವನ್ನು ತಿಳಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ಅವರ ಆದೇಶದ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಾದಾಮಿಕರ್ ಅವರು ಈ ಸುತ್ತೋಲೆ ಹೊರಡಿಸಿದ್ದಾರೆ. ಏ.14ರವರೆಗೆ ರಾಜ್ಯದಲ್ಲಿ ಲಾಕ್‌ಡೌನ್ ಇರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT