ರಾಜ್ಯ

ಲಾಕ್ ಡೌನ್: ತುರ್ತು ವಿಚಾರಣೆಗೆ ಹೈಕೋರ್ಟ್ ಸುತ್ತೋಲೆ

ಅತ್ಯಂತ ತುರ್ತು ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲು ಜಿಲ್ಲಾ ನ್ಯಾಯಾಲಯಗಳಿಗೆ ದಿನ ಮತ್ತು ಸಮಯ ನಿಗದಿ ಮಾಡಿ ಹೈಕೋರ್ಟ್ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು : ಅತ್ಯಂತ ತುರ್ತು ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲು ಜಿಲ್ಲಾ ನ್ಯಾಯಾಲಯಗಳಿಗೆ ದಿನ ಮತ್ತು ಸಮಯ ನಿಗದಿ ಮಾಡಿ ಹೈಕೋರ್ಟ್ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಎಲ್ಲಾ 30 ಜಿಲ್ಲಾ ನ್ಯಾಯಾಲಯಗಳು ಹಾಗೂ ಸಣ್ಣ ಪ್ರಕರಣಗಳ ವಿಚಾರಣಾ ನ್ಯಾಯಾಲಯಗಳು ಮತ್ತು ಕೌಟುಂಬಿಕ ನ್ಯಾಯಾಲಯಗಳು ಮಂಗಳವಾರ ಮತ್ತು ಶುಕ್ರವಾರ ತುರ್ತು ಪ್ರಕರಣಗಳ ವಿಚಾರಣೆ ನಡೆಸಲಿವೆ. ಈ ಎರಡು ದಿನಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಪ್ರಕರಣಗಳ ವಿಚಾರಣೆ ನಡೆಸಲಿವೆ.

ತುಂಬಾ ಅನಿವಾರ್ಯತೆ ಇದೆ ಎಂಬಂತಹ ಪರಿಸ್ಥಿತಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಗಾಗಿ ವಕೀಲರು ಮತ್ತು ಪಾರ್ಟಿ ಇನ್ ಪರ್ಸನ್ (ಖುದ್ದು ವಾದಿಸುವವರು) ಇ-ಮೇಲ್ ಮೂಲಕ ಆಯಾ ಜಿಲ್ಲಾ ಪ್ರಧಾನ ನ್ಯಾಯಾಧೀಶರಿಗೆ ಮನವಿ ಸಲ್ಲಿಸಬಹುದು. ಜಿಲ್ಲಾ ನ್ಯಾಯಾಧೀಶರು ಮನವಿಯಲ್ಲಿನ ಮಾಹಿತಿ ಮತ್ತು ಅನಿವಾರ್ಯತೆ ಆಧರಿಸಿ ಪ್ರಕರಣ ದಾಖಲಿಸಲು ಅನುಮತಿ ನೀಡುತ್ತಾರೆ. ಆ ಬಳಿಕ ವಕೀಲರು ಅಥವಾ ಪಾರ್ಟಿ ಇನ್ ಪರ್ಸನ್ ಇ-ಫೈಲಿಂಗ್ ಮೂಲಕ ಅರ್ಜಿ ಸಲ್ಲಿಸಬಹುದು. ಅದನ್ನು ಪರಿಗಣಿಸಿ ವಿಚಾರಣೆಯ ದಿನ ಮತ್ತು ಸಮಯವನ್ನು ತಿಳಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ಅವರ ಆದೇಶದ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಾದಾಮಿಕರ್ ಅವರು ಈ ಸುತ್ತೋಲೆ ಹೊರಡಿಸಿದ್ದಾರೆ. ಏ.14ರವರೆಗೆ ರಾಜ್ಯದಲ್ಲಿ ಲಾಕ್‌ಡೌನ್ ಇರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್