ಕೊಪ್ಪಳದಲ್ಲಿ ನಿನ್ನೆ ಪರಿಶೀಲನಾ ಸಭೆ ನಡೆಸಿದ ಆರೋಗ್ಯ ಸಚಿವ ಬಿ ಶ್ರೀರಾಮುಲು 
ರಾಜ್ಯ

ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಕರ್ನಾಟಕದ ಜನರ ಮಾಹಿತಿ ಸಿಕ್ಕಿದೆ:ಸಚಿವ ಶ್ರೀರಾಮುಲು

ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ಬೆಂಗಳೂರು: ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಮರ್ಕಜ್ ನಲ್ಲಿ ಭಾಗವಿಸಿದ್ದ ವಿವಿಧ ರಾಜ್ಯಗಳ ಅನೇಕರಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಲ್ಲಿ ಹಾಜರಿದ್ದ ರಾಜ್ಯದ ಜನತೆ ಸ್ವಯಂ ಪ್ರೇರಿತರಾಗಿ ಆಗಮಿಸಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವಂತ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿತ್ತು.

ಇದೀಗ ಸ್ವತಃ ಆರೋಗ್ಯ ಸಚಿವರೇ ಇಂದು ಟ್ವೀಟ್ ಮಾಡಿದ್ದು, ಕರ್ನಾಟಕದ 300 ಜನರು ಭಾಗವಹಿಸಿದ್ದವರ ಬಗ್ಗೆ ಮಾಹಿತಿ ಸಿಕ್ಕಿದೆ. ಇವರಲ್ಲಿ 40 ಜನರನ್ನು ಪರೀಕ್ಷೆಗೊಳಪಡಿಸಲಾಗಿದ್ದು ಎಲ್ಲರನ್ನೂ ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿ ಇಡಲಾಗುತ್ತಿದೆ. 40 ಮಂದಿಯಲ್ಲಿ 12 ಜನರ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ಎಂದು ಬಂದಿದೆ ಎಂದರು.

ಇನ್ನು ಅಂದು ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಇಂಡೋನೇಷ್ಯಾ ಮತ್ತು ಮಲೇಷಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಕೂಡ ಸರ್ಕಾರಕ್ಕೆ ಸಿಕ್ಕಿದೆ. ತಮ್ಮ ದೇಶಕ್ಕೆ ವಾಪಸ್ಸಾಗದ ಈ ದೇಶಗಳ ಪ್ರಜೆಗಳನ್ನು ಪತ್ತೆಹಚ್ಚಿ ಕ್ವಾರಂಟೈನ್ ನಲ್ಲಿಡುವ ಕೆಲಸವನ್ನು ಗೃಹ ಇಲಾಖೆ ಮತ್ತು ಆರೋಗ್ಯ ಇಲಾಖೆ ಮಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ, ಮಳೆ ಮುನ್ಸೂಚನೆ ಇಲ್ಲ ಎಂದ IMD

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

SCROLL FOR NEXT