ಕೊಪ್ಪಳದಲ್ಲಿ ನಿನ್ನೆ ಪರಿಶೀಲನಾ ಸಭೆ ನಡೆಸಿದ ಆರೋಗ್ಯ ಸಚಿವ ಬಿ ಶ್ರೀರಾಮುಲು 
ರಾಜ್ಯ

ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಕರ್ನಾಟಕದ ಜನರ ಮಾಹಿತಿ ಸಿಕ್ಕಿದೆ:ಸಚಿವ ಶ್ರೀರಾಮುಲು

ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ಬೆಂಗಳೂರು: ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಮರ್ಕಜ್ ನಲ್ಲಿ ಭಾಗವಿಸಿದ್ದ ವಿವಿಧ ರಾಜ್ಯಗಳ ಅನೇಕರಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಲ್ಲಿ ಹಾಜರಿದ್ದ ರಾಜ್ಯದ ಜನತೆ ಸ್ವಯಂ ಪ್ರೇರಿತರಾಗಿ ಆಗಮಿಸಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವಂತ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿತ್ತು.

ಇದೀಗ ಸ್ವತಃ ಆರೋಗ್ಯ ಸಚಿವರೇ ಇಂದು ಟ್ವೀಟ್ ಮಾಡಿದ್ದು, ಕರ್ನಾಟಕದ 300 ಜನರು ಭಾಗವಹಿಸಿದ್ದವರ ಬಗ್ಗೆ ಮಾಹಿತಿ ಸಿಕ್ಕಿದೆ. ಇವರಲ್ಲಿ 40 ಜನರನ್ನು ಪರೀಕ್ಷೆಗೊಳಪಡಿಸಲಾಗಿದ್ದು ಎಲ್ಲರನ್ನೂ ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿ ಇಡಲಾಗುತ್ತಿದೆ. 40 ಮಂದಿಯಲ್ಲಿ 12 ಜನರ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ಎಂದು ಬಂದಿದೆ ಎಂದರು.

ಇನ್ನು ಅಂದು ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಇಂಡೋನೇಷ್ಯಾ ಮತ್ತು ಮಲೇಷಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಕೂಡ ಸರ್ಕಾರಕ್ಕೆ ಸಿಕ್ಕಿದೆ. ತಮ್ಮ ದೇಶಕ್ಕೆ ವಾಪಸ್ಸಾಗದ ಈ ದೇಶಗಳ ಪ್ರಜೆಗಳನ್ನು ಪತ್ತೆಹಚ್ಚಿ ಕ್ವಾರಂಟೈನ್ ನಲ್ಲಿಡುವ ಕೆಲಸವನ್ನು ಗೃಹ ಇಲಾಖೆ ಮತ್ತು ಆರೋಗ್ಯ ಇಲಾಖೆ ಮಾಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್

Mojtaba Khamenei ಎಲ್ಲಿದ್ದಾರೆ? ರಹಸ್ಯ ತಾಣದಲ್ಲಿ ಪರಮೋಚ್ಛ ನಾಯಕ; ಅವರ ಉಪಸ್ಥಿತಿಯೇ ನಮ್ಮ ಧೈರ್ಯ ಎಂದ Iran ಅಧ್ಯಕ್ಷ

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ