ಭಾಸ್ಕರ್ ರಾವ್ 
ರಾಜ್ಯ

ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನ: ದೂರು ನೀಡಿದರೆ ಕಾನೂನು ಕ್ರಮ- ಭಾಸ್ಕರ್ ರಾವ್

ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಸಮೀಕ್ಷೆ ಮಾಡಲು ತೆರಳಿದ್ದ ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬುಧವಾರ ನಗರದ ಸಾರಾಯಿ‌ ಪಾಳ್ಯದ ಸಾಧಿಕ್ ಲೇಔಟ್ ನಲ್ಲಿ ನಡೆದಿದೆ.

ಬೆಂಗಳೂರು:  ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಸಮೀಕ್ಷೆ ಮಾಡಲು ತೆರಳಿದ್ದ ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬುಧವಾರ ನಗರದ ಸಾರಾಯಿ‌ ಪಾಳ್ಯದ ಸಾಧಿಕ್ ಲೇಔಟ್ ನಲ್ಲಿ ನಡೆದಿದೆ.

ಕಳೆದ 15 ದಿನಗಳಿಂದ ನರ್ಸ್, ಆಶಾ ಕಾರ್ಯಕರ್ತೆಯರು ನೆಗಡಿ, ಕೆಮ್ಮು, ಜ್ವರ ಕುರಿತು ಜನರಿಂದ ಮಾಹಿತಿ ಸಂಗ್ರಹಿಸುತ್ತಿದ್ದು, ಬುಧವಾರ ಸಾಧಿಕ್ ಲೇಔಟ್ ಗೆ ತೆರಳಿದಾಗ ಆಶಾ ಕಾರ್ಯಕರ್ತೆ ಯರ ಬಳಿ ಇದ್ದ ವರದಿಯನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ ಎನ್ನಲಾಗಿದೆ.

ಅಲ್ಲದೇ, ತಮ್ಮ ಮೊಬೈಲ್ ಫೋನ್ ಕಸಿದುಕೊಂಡು ಯಾರನ್ನು ಕರೆಯುತ್ತೀರಾ ಕರೆಯಿರಿ ಎಂದು ಬೆದರಿಕ ಹಾಕಿದ ದುಷ್ಕರ್ಮಿಗಳು, ತಮಗೆ ಯಾವುದೇ ಮಾಹಿತಿ,‌ ಮೊಬೈಲ್ ಸಂಖ್ಯೆ ನೀಡದಂತೆ ಮಸೀದಿಯ ಮೈಕ್ ನಲ್ಲಿ ಅನೌನ್ಸ್ ಮಾಡಿದ್ದಾರೆ ಎಂದು ಸ್ಥಳದಲ್ಲಿದ್ದ ಸಿಬ್ಬಂದಿ ಆರೋಪಿಸಿದ್ದಾರೆ.

ಅಲ್ಲದೇ, ಈ ಕುರಿತು ಮಾಹಿತಿ ನೀಡಿದಾಗ ಆರೋಗ್ಯ ಇಲಾಖೆಯ ಅಧಿಕಾರಿಗಳಾಗಲೀ, ಪೊಲೀಸರು ಸ್ಪಂದಿಸಿಲ್ಲ ಎಂದು ಆಶಾ ಕಾರ್ಯಕರ್ತೆಯೊಬ್ಬರು ಆರೋಪಿಸಿದ್ದಾರೆ.

ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪ್ರತಿಕ್ರಿಯಿಸಿ, ಸಾಧಿಕ್ ಲೇಔಟ್ ನಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಲೇಔಟ್ ನಲ್ಲಿ‌ ಸರ್ವೇ ಮಾಡಲು‌ ನಿರ್ಧರಿಸಲಾಗಿತ್ತು. ಇದಕ್ಕೆ ಅಲ್ಲಿನ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದರು ಎಂದರು.

ಘಟನಾ ಸ್ಥಳಕ್ಕೆ ಹೊಯ್ಸಳ ಪೊಲೀಸರು ತೆರಳಿ, ಗುಂಪಾಗಿದ್ದ ಜನರನ್ನು ಚದುರಿಸಿದ್ದು,‌ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದರು‌.

ಈ ಕುರಿತು ಇದೂವರೆಗೂ ಯಾವುದೇ ದೂರು ದಾಖಲಾಗಿಲ್ಲ. ನರ್ಸ್, ಆಶಾ ಕಾರ್ಯಕರ್ತೆಯರು ದೂರು ನೀಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT