ಸೆಂಟ್ ಜಾನ್ಸ್ ಆಸ್ಪತ್ರೆ 
ರಾಜ್ಯ

ಕೋವಿಡ್-19: ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ 200 ಹಾಸಿಗೆಯುಳ್ಳ ಕ್ವಾರೆಂಟೈನ್ ವ್ಯವಸ್ಥೆ 

ಕೋವಿಡ್ -19 ರೋಗಿಗಳು ಹಾಗೂ ಶಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ  ಸೆಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ  200 ಹಾಸಿಗೆಯುಳ್ಳ ಕ್ವಾರೆಂಟೈನ್ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು: ಕೋವಿಡ್ -19 ರೋಗಿಗಳು ಹಾಗೂ ಶಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ  ಸೆಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ  200 ಹಾಸಿಗೆಯುಳ್ಳ ಕ್ವಾರೆಂಟೈನ್ ವ್ಯವಸ್ಥೆ ಮಾಡಲಾಗಿದೆ.

ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ ನಾರಾಯಣ್, ಬಿಬಿಎಂಪಿ ಆಯುಕ್ತ ಬಿಹೆಚ್ ಅನಿಲ್ ಕುಮಾರ್ ಹಾಗೂ ಮೇಯರ್ ಗೌತಮ್ ಕುಮಾರ್ ಅವರೊಂದಿಗೆ ನಡೆದ ಸಭೆಯಲ್ಲಿ ಆಸ್ಪತ್ರೆ ಆಡಳಿತ ಮಂಡಳಿ ಈ ಬಗ್ಗೆ ಮಾಹಿತಿ ನೀಡಿತು.

ಸರ್ಜಾಪುರ ರಸ್ತೆಯಲ್ಲಿರುವ ಈ ಘಟಕದಲ್ಲಿ ಸೂಕ್ತ ವೆಂಟಿಲೇಟರ್ ಹಾಗೂ ಐಸೋಲೇಷನ್ ಕೊಠಡಿಗಳು ಇರಲಿವೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ ತಿಳಿಸಿದರು.

ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ರೋಗಿಗಳನ್ನು ಹೇಗೆ ನಿರ್ವಹಣೆ ಮಾಡಬೇಕೆಂಬ ಬಗ್ಗೆ ಎಲ್ಲಾ ಸಿಬ್ಬಂದಿಗಳಿಗೂ ತರಬೇತಿ ನೀಡಲಾಗಿದೆ. 15 ಐಸಿಯು ಹಾಸಿಗೆಗಳು ಮತ್ತು ಸಹಾಯಕ ಸಿಬ್ಬಂದಿಗಳೊಂದಿಗೆ ತಜ್ಞ ವೈದ್ಯರನ್ನೊಗೊಂಡ ತಂಡವೊಂದನ್ನು ರಚಿಸಲಾಗಿದೆ ಎಂದು ಆಸ್ಪತ್ರೆ ನಿರ್ದೇಶಕ ಡಾ. ಪೌಲ್  ಪಾರ್ಥಜಾಮ್ ತಿಳಿಸಿದ್ದಾರೆ. 

ಕೋವಿಡ್-19 ರೋಗಿಗಳು ಅಥವಾ ಶಂಕಿತರ ತಪಾಸಣೆ, ಐಸೋಲೇಷನ್ ಮತ್ತು ಆರೈಕೆಗಾಗಿ ವಿಶೇಷ ವ್ಯವಸ್ಥೆಯನ್ನು ಮಾಜಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.

ಮಾಸ್ಕ್ ಗಳು, ಪಿಪಿಪಿ ಕಿಟ್ಸ್ ಮತ್ತು ಸ್ಯಾನಿಟೈಸರ್ಸ್ ಗಳನ್ನು ಸೆಂಟ್  ಜಾನ್ಸ್ ಆಸ್ಪತ್ರೆಯೇ ಉತ್ಪಾದಿಸಿ ಪೂರೈಕೆ ಮಾಡುತ್ತಿದೆ. ಯಾವುದೇ ಮಾಹಿತಿಗಾಗಿ ಸಾರ್ವಜನಿಕರು ದೂ. 080-66744788 ಅಥವಾ ಆಸ್ಪತ್ರೆಯ ವೆಬ್ ಸೈಟ್ ಸಂಪರ್ಕಿಸಬಹುದು. ಇದರ ಜೊತೆಗೆ ಬಿಬಿಎಂಪಿ ಬೆಂಗಳೂರು ನಗರದಾದ್ಯಂತ 31 ಜ್ವರದ ಕ್ಲಿನಿಕ್ ಗಳನ್ನು ಸ್ಥಾಪಿಸಿದೆ. ಇತ್ತೀಚಿಗೆ 17 ಆಸ್ಪತ್ರೆಗಳನ್ನು ಕ್ವಾರಂಟೈನ್ ವಲಯಗಳಾಗಿ ಪರಿವರ್ತಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT