ಸೆಂಟ್ ಜಾನ್ಸ್ ಆಸ್ಪತ್ರೆ 
ರಾಜ್ಯ

ಕೋವಿಡ್-19: ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ 200 ಹಾಸಿಗೆಯುಳ್ಳ ಕ್ವಾರೆಂಟೈನ್ ವ್ಯವಸ್ಥೆ 

ಕೋವಿಡ್ -19 ರೋಗಿಗಳು ಹಾಗೂ ಶಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ  ಸೆಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ  200 ಹಾಸಿಗೆಯುಳ್ಳ ಕ್ವಾರೆಂಟೈನ್ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು: ಕೋವಿಡ್ -19 ರೋಗಿಗಳು ಹಾಗೂ ಶಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ  ಸೆಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ  200 ಹಾಸಿಗೆಯುಳ್ಳ ಕ್ವಾರೆಂಟೈನ್ ವ್ಯವಸ್ಥೆ ಮಾಡಲಾಗಿದೆ.

ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ ನಾರಾಯಣ್, ಬಿಬಿಎಂಪಿ ಆಯುಕ್ತ ಬಿಹೆಚ್ ಅನಿಲ್ ಕುಮಾರ್ ಹಾಗೂ ಮೇಯರ್ ಗೌತಮ್ ಕುಮಾರ್ ಅವರೊಂದಿಗೆ ನಡೆದ ಸಭೆಯಲ್ಲಿ ಆಸ್ಪತ್ರೆ ಆಡಳಿತ ಮಂಡಳಿ ಈ ಬಗ್ಗೆ ಮಾಹಿತಿ ನೀಡಿತು.

ಸರ್ಜಾಪುರ ರಸ್ತೆಯಲ್ಲಿರುವ ಈ ಘಟಕದಲ್ಲಿ ಸೂಕ್ತ ವೆಂಟಿಲೇಟರ್ ಹಾಗೂ ಐಸೋಲೇಷನ್ ಕೊಠಡಿಗಳು ಇರಲಿವೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ ತಿಳಿಸಿದರು.

ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ರೋಗಿಗಳನ್ನು ಹೇಗೆ ನಿರ್ವಹಣೆ ಮಾಡಬೇಕೆಂಬ ಬಗ್ಗೆ ಎಲ್ಲಾ ಸಿಬ್ಬಂದಿಗಳಿಗೂ ತರಬೇತಿ ನೀಡಲಾಗಿದೆ. 15 ಐಸಿಯು ಹಾಸಿಗೆಗಳು ಮತ್ತು ಸಹಾಯಕ ಸಿಬ್ಬಂದಿಗಳೊಂದಿಗೆ ತಜ್ಞ ವೈದ್ಯರನ್ನೊಗೊಂಡ ತಂಡವೊಂದನ್ನು ರಚಿಸಲಾಗಿದೆ ಎಂದು ಆಸ್ಪತ್ರೆ ನಿರ್ದೇಶಕ ಡಾ. ಪೌಲ್  ಪಾರ್ಥಜಾಮ್ ತಿಳಿಸಿದ್ದಾರೆ. 

ಕೋವಿಡ್-19 ರೋಗಿಗಳು ಅಥವಾ ಶಂಕಿತರ ತಪಾಸಣೆ, ಐಸೋಲೇಷನ್ ಮತ್ತು ಆರೈಕೆಗಾಗಿ ವಿಶೇಷ ವ್ಯವಸ್ಥೆಯನ್ನು ಮಾಜಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.

ಮಾಸ್ಕ್ ಗಳು, ಪಿಪಿಪಿ ಕಿಟ್ಸ್ ಮತ್ತು ಸ್ಯಾನಿಟೈಸರ್ಸ್ ಗಳನ್ನು ಸೆಂಟ್  ಜಾನ್ಸ್ ಆಸ್ಪತ್ರೆಯೇ ಉತ್ಪಾದಿಸಿ ಪೂರೈಕೆ ಮಾಡುತ್ತಿದೆ. ಯಾವುದೇ ಮಾಹಿತಿಗಾಗಿ ಸಾರ್ವಜನಿಕರು ದೂ. 080-66744788 ಅಥವಾ ಆಸ್ಪತ್ರೆಯ ವೆಬ್ ಸೈಟ್ ಸಂಪರ್ಕಿಸಬಹುದು. ಇದರ ಜೊತೆಗೆ ಬಿಬಿಎಂಪಿ ಬೆಂಗಳೂರು ನಗರದಾದ್ಯಂತ 31 ಜ್ವರದ ಕ್ಲಿನಿಕ್ ಗಳನ್ನು ಸ್ಥಾಪಿಸಿದೆ. ಇತ್ತೀಚಿಗೆ 17 ಆಸ್ಪತ್ರೆಗಳನ್ನು ಕ್ವಾರಂಟೈನ್ ವಲಯಗಳಾಗಿ ಪರಿವರ್ತಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT