ಆಶಾ‌ ಕಾರ್ಯಕರ್ತೆ ನಿವಾಸಕ್ಕೆ ಡಿಸಿಎಂ ಡಾ. ಅಶ್ವತ್ಥ ನಾರಾಯಣ ಭೇಟಿ 
ರಾಜ್ಯ

ಆಶಾ‌ ಕಾರ್ಯಕರ್ತೆ ನಿವಾಸಕ್ಕೆ ಡಿಸಿಎಂ ಡಾ. ಅಶ್ವತ್ಥ ನಾರಾಯಣ ಭೇಟಿ: ದೂರು ಸ್ವೀಕರಿಸದ‌ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚನೆ

ಬೆಂಗಳೂರಿನ ಹೆಗಡೆ ನಗರ ಸಮೀಪ ಬರುವ ಸಾರಾಯಿಪಾಳ್ಯದ ಸಾದಿಕ್ ನಗರದಲ್ಲಿ ದಾದಿಯರು ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ‌ ಗುಂಪೊಂದು ದಾಳಿ ನಡೆಸಿದ ಎನ್ನಲಾದ‌ ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು.

ಬೆಂಗಳೂರು:  ಬೆಂಗಳೂರಿನ ಹೆಗಡೆ ನಗರ ಸಮೀಪ ಬರುವ ಸಾರಾಯಿಪಾಳ್ಯದ ಸಾದಿಕ್ ನಗರದಲ್ಲಿ ದಾದಿಯರು ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ‌ ಗುಂಪೊಂದು ದಾಳಿ ನಡೆಸಿದ ಎನ್ನಲಾದ‌ ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು.

ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ ಹೆಗಡೆ ನಗರದ ಕೃಷ್ಣ ವೇಣಿ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದರು.

ಡಿಸಿಪಿ ಜತೆ ಮಾತನಾಡಿದ ಅಶ್ವತ್ಥ ನಾರಾಯಣ್, ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಹಾಗೂ ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚನೆ‌ ನೀಡಿದರು.

ಬಳಿಕ ಮಾತನಾಡಿದ ಅವರು, ಯಾರೇ‌ ಹಲ್ಲೆ ಮಾಡಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು. ಇಲ್ಲಿ ಜಾತಿ ಧರ್ಮ ಮುಖ್ಯವಲ್ಲ. ಅಗತ್ಯ ಭದ್ರತೆ ನೀಡುತ್ತೇವೆ. ಹೆದರುವುದು ಬೇಡ ಎಂದು ಅಭಯ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT