ರಾಜ್ಯ

ಕೋವಿಡ್-19 ಹಿನ್ನೆಲೆ: ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿ ಆದೇಶ ಹೊರಡಿಸದಂತೆ ಸೂಚನೆ

Manjula VN

ಬೆಂಗಳೂರು: ದೇಶಾದ್ಯಂತ ಕೋವಿಡ್‌- 19 ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಆಡಳಿತ ಇಲಾಖೆಗಳು ಮುಂದುವರೆದ ಯೋಜನೆಗಳಿಗೆ ಹಾಗೂ ಹೊಸ ಯೋಜನೆಗಳಿಗೆ ಸಂಬಂಧಿಸಿದಂತೆ ಆದೇಶವನ್ನು ಹೊರಡಿಸದಂತೆ ರಾಜ್ಯ ಹಣಕಾಸು ಇಲಾಖೆ ಸೂಚಿಸಿದೆ.

ಒಂದು ವೇಳೆ ಈಗಾಗಲೇ ಯೋಜನೆಗಳಿಗೆ ಸಂಬಂಧಿಸಿದಂತೆ ಆದೇಶವನ್ನು ಹೊರಡಿಸಿದ್ದರೆ ಕೂಡಲೇ ಹಿಂದಕ್ಕೆ ಪಡೆಯುವಂತೆ ಹಣಕಾಸು ಇಲಾಖೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದೆ.

ಆಡಳಿತ ಇಲಾಖೆಗಳ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳಿಗೆ ಈ ಸೂಚನೆ ನೀಡಲಾಗಿದೆ.

SCROLL FOR NEXT