ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಪ್ರಕರಣ 
ರಾಜ್ಯ

ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಪ್ರಕರಣ: ಪೊಲೀಸರಿಂದ ಮೂವರ ಬಂಧನ

ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿರುವ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿರುವ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದಾರೆ.

ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆಗೆ ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಈ ವಿಚಾರ ವ್ಯಾಪಕ ಸುದ್ದಿಗೆವಾಗುತ್ತಿದ್ದಂತೆಯೇ ಎಚ್ಚೆತ್ತಿದ್ದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಪುಲಿಕೇಶಿ ನಗರ ಪೊಲೀಸ್  ಠಾಣೆಯ ಎಸಿಪಿ ತಬರಕ್ ಫಾತಿಮಾ ಅವರನ್ನು ಪ್ರಕರಣದ ತನಿಖೆಗೆ ನಿಯೋಜಿಸಿದ್ದರು. ಅದರಂತೆ ವಿಚಾರಣೆ ನಡೆಸಿದ್ದ ಎಸಿಪಿ ಫಾತಿಮಾ ಅವರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆಗೆ ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿತ್ತು. ಬೆಂಗಳೂರಿನ ಥಣಿಸಂದ್ರ ಮುಖ್ಯ ರಸ್ತೆ ಸಾರಾಯಿಪಾಳ್ಯದ ಸಾದಿಕ್ ಕಾಲೊನಿಯಲ್ಲಿ  ವ್ಯಕ್ತಿಯೊಬ್ಬನಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದರಿಂದ ವೈದ್ಯಕೀಯ ಸಿಬ್ಬಂದಿ ಆರೋಗ್ಯ ತಪಾಸಣೆಗೆ ತೆರಳಿದ್ದರು. ಈ ವೇಳೆ ಕೆಲವರು ಆಶಾ ಕಾರ್ಯಕರ್ತೆಯರ ಜೊತೆ ವಾಗ್ವಾದ ನಡೆಸಿದ್ದಾರೆ. ಹಲ್ಲೆ ಕೂಡ ಮಾಡಿದ್ದಾರೆ ಎಂದು ಆಶಾ ಕಾರ್ಯಕರ್ತೆಯರು ದೂರಿದ್ದಾರೆ. ವಾಗ್ವಾದ  ನಡೆದ ಸಂದರ್ಭದಲ್ಲಿ ಕೆಲವರು ಮೈಕ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ಕೊಡಬಾರದು, ಪೋನ್ ನಂಬರ್ ಕೊಡಬಾರದು ಎಂದು ಬೆದರಿಕೆ ಹಾಕಿ, ಕಾಗದಗಳನ್ನು ಹರಿದು ಹಾಕಿದ್ದಾರೆ ಎಂದು ಕೃಷ್ಣವೇಣಿ ಎನ್ನುವ ಆಶಾ ಕಾರ್ಯಕರ್ತೆಯರು ದೂರಿದ್ದಾರೆ.

ಇನ್ನು ಹಲ್ಲೆಗೊಳಗಾಗಿದ್ದ ಆಶಾ ಕಾರ್ಯಕರ್ತೆ ಕೃಷ್ಣವೇಣಿ ಅವರ ಮನೆಗೆ ಡಿಸಿಎಂ ಅಶ್ವತ್ ನಾರಾಯಣ ಅವರು ಭೇಟಿ ನೀಡಿ ವಿಚಾರಿಸಿದ್ದರು. ಇದರ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಸಿಎಂ ಬಿಎಸ್ ವೈ, ಕೆಲ ಕಡೆ ಸಣ್ಣಪುಟ್ಟ ಘಟನೆಗಳು ಆಗಿವೆ. ಅವರಿಗೆ ಮನವರಿಕೆ  ಮಾಡಿಕೊಡಬೇಕಾಗುತ್ತೆ. ಜತೆಗೆ ದೆಹಲಿಗೆ ಹೋಗಿ ಬಂದವರು ಕೂಡ ಸಹಕರಿಸಬೇಕು. ಸ್ವಯಂಪ್ರೇರಿತರಾಗಿ ಹೊರಬಂದು ಪರೀಕ್ಷೆಗೆ ಸಹಕಾರ ಕೊಡಿ. ಸಾದಿಕ್ ಕಾಲೊನಿಯಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿರುವುದು ಸರಿ ಅಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT