ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ 
ರಾಜ್ಯ

ಕರ್ನಾಟಕ-ಕೇರಳ ಗಡಿ ಬಂದ್: ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರ ವೈಫಲ್ಯ ಎಂದ ಬಿಜೆಪಿ

ಕರ್ನಾಟಕ-ಕೇರಳ ಗಡಿಭಾಗವನ್ನು ಮುಚ್ಚಿರುವ ಬಗ್ಗೆ ಕೇರಳ ಮತ್ತು ಕರ್ನಾಟಕ ಸರ್ಕಾರಗಳ ಮಧ್ಯೆ ವಾದ-ವಿವಾದಗಳ ಮುಂದುವರಿದಿರುವಾಗ ಬಿಜೆಪಿ ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ ಎನ್ನಲಾಗುತ್ತಿದೆ.

ಮಂಗಳೂರು:ಕರ್ನಾಟಕ-ಕೇರಳ ಗಡಿಭಾಗವನ್ನು ಮುಚ್ಚಿರುವ ಬಗ್ಗೆ ಕೇರಳ ಮತ್ತು ಕರ್ನಾಟಕ ಸರ್ಕಾರಗಳ ಮಧ್ಯೆ ವಾದ-ವಿವಾದಗಳ ಮುಂದುವರಿದಿರುವಾಗ ಬಿಜೆಪಿ ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ ಎನ್ನಲಾಗುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಜಿಲ್ಲೆಯ ಬಿಜೆಪಿ ಶಾಸಕರು ಸೋಷಿಯಲ್ ಮೀಡಿಯಾದಲ್ಲಿ #SaveKarnatakafromPinarayi  ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಅಭಿಯಾನ ಆರಂಭಿಸಿದ್ದು ಕೇರಳ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಕೇರಳದಲ್ಲಿ ಆರೋಗ್ಯ ಸೇವೆ ಅಸಮರ್ಪಕವಾಗಿದ್ದು ಇದರಿಂದಾಗಿ ಅಲ್ಲಿನ ಜನರು ಮಂಗಳೂರನ್ನು ಅವಲಂಬಿಸಬೇಕಾಗಿ ಬಂದಿದೆ ಎಂದು ಆರೋಪಿಸುತ್ತಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ಗಡಿಯನ್ನು ತೆರೆದು ಕೇರಳದಲ್ಲಿನ ರೋಗಿಗಳು ಮಂಗಳೂರಿಗೆ ಬಂದು ಚಿಕಿತ್ಸೆ ಪಡೆಯಲು ಅವಕಾಶ ಮಾಡಿಕೊಡಿ ಎಂದು ಕೇಳುತ್ತಿರುವುದು ಮೂರ್ಖತನ, ರಾಜ್ಯವೊಂದು ಆರೋಗ್ಯ ಸೇವೆಗೆ ಬೇರೆ ರಾಜ್ಯವನ್ನು ನಂಬಿಕೊಂಡಿರುವುದು ದುರಂತ. ಕಾಸರಗೋಡು ಜಿಲ್ಲೆಯೊಂದರಲ್ಲಿಯೇ ಕರ್ನಾಟಕದ ಒಟ್ಟು ಕೊರೋನಾ ರೋಗಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಗಡಿಯನ್ನು ತೆರೆದರೆ ಕಾಸರಗೋಡಿನಿಂದ ಖಂಡಿತವಾಗಿಯೂ ಮಂಗಳೂರಿಗೆ ಚಿಕಿತ್ಸೆಗೆ ಬರುತ್ತಾರೆ, ಆಗ ಇಲ್ಲಿರುವವರಿಗೆ ತೊಂದರೆಯಾಗುತ್ತದೆ ಎಂದು ಕರ್ನಾಟಕದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಮತ್ತು ಕಾಸರಗೋಡಿನ ಜನತೆ ಉತ್ತಮ ಸಂಬಂಧ ಹೊಂದಿದ್ದಾರೆ. ಈ ಸಂದರ್ಭದಲ್ಲಿ ಪಿನರಾಯಿ ಅವರು ಅದಕ್ಕೆ ಅಡ್ಡಗಾಲು ಹಾಕಬಾರದು. ಅದರ ಬದಲಿಗೆ ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಮಾಡಿ ಕಾಸರಗೋಡಿನಲ್ಲಿ ಸುಸಜ್ಜಿತ ಆಸ್ಪತ್ರೆ ತೆರೆಯುವಂತೆ ಮನವಿ ಮಾಡಲಿ ಎಂದಿದ್ದಾರೆ.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ಮೂಲಭೂತ ಅವಶ್ಯಕತೆಯಾಗಿರುವ ಆರೋಗ್ಯ ಸೇವೆಗೆ ಕಾಸರಗೋಡಿನ ಮಂದಿ ಮಂಗಳೂರನ್ನು ಅವಲಂಬಿಸಿದ್ದಾರೆ. ಕೇರಳ ಮುಖ್ಯಮಂತ್ರಿಗಳು ಎಂತಹ ಅಭಿವೃದ್ಧಿಪರ ಕೆಲಸಗಳನ್ನು ಮಾಡುತ್ತಿದ್ದಾರೆ, ಈ ಸಂದರ್ಭದಲ್ಲಿ ಗಡಿಭಾಗವನ್ನು ಖಂಡಿತಾ ತೆರೆಯಲು ಸಾಧ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT