ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ 
ರಾಜ್ಯ

ಕರ್ನಾಟಕ-ಕೇರಳ ಗಡಿ ಬಂದ್: ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರ ವೈಫಲ್ಯ ಎಂದ ಬಿಜೆಪಿ

ಕರ್ನಾಟಕ-ಕೇರಳ ಗಡಿಭಾಗವನ್ನು ಮುಚ್ಚಿರುವ ಬಗ್ಗೆ ಕೇರಳ ಮತ್ತು ಕರ್ನಾಟಕ ಸರ್ಕಾರಗಳ ಮಧ್ಯೆ ವಾದ-ವಿವಾದಗಳ ಮುಂದುವರಿದಿರುವಾಗ ಬಿಜೆಪಿ ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ ಎನ್ನಲಾಗುತ್ತಿದೆ.

ಮಂಗಳೂರು:ಕರ್ನಾಟಕ-ಕೇರಳ ಗಡಿಭಾಗವನ್ನು ಮುಚ್ಚಿರುವ ಬಗ್ಗೆ ಕೇರಳ ಮತ್ತು ಕರ್ನಾಟಕ ಸರ್ಕಾರಗಳ ಮಧ್ಯೆ ವಾದ-ವಿವಾದಗಳ ಮುಂದುವರಿದಿರುವಾಗ ಬಿಜೆಪಿ ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ ಎನ್ನಲಾಗುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಜಿಲ್ಲೆಯ ಬಿಜೆಪಿ ಶಾಸಕರು ಸೋಷಿಯಲ್ ಮೀಡಿಯಾದಲ್ಲಿ #SaveKarnatakafromPinarayi  ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಅಭಿಯಾನ ಆರಂಭಿಸಿದ್ದು ಕೇರಳ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಕೇರಳದಲ್ಲಿ ಆರೋಗ್ಯ ಸೇವೆ ಅಸಮರ್ಪಕವಾಗಿದ್ದು ಇದರಿಂದಾಗಿ ಅಲ್ಲಿನ ಜನರು ಮಂಗಳೂರನ್ನು ಅವಲಂಬಿಸಬೇಕಾಗಿ ಬಂದಿದೆ ಎಂದು ಆರೋಪಿಸುತ್ತಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ಗಡಿಯನ್ನು ತೆರೆದು ಕೇರಳದಲ್ಲಿನ ರೋಗಿಗಳು ಮಂಗಳೂರಿಗೆ ಬಂದು ಚಿಕಿತ್ಸೆ ಪಡೆಯಲು ಅವಕಾಶ ಮಾಡಿಕೊಡಿ ಎಂದು ಕೇಳುತ್ತಿರುವುದು ಮೂರ್ಖತನ, ರಾಜ್ಯವೊಂದು ಆರೋಗ್ಯ ಸೇವೆಗೆ ಬೇರೆ ರಾಜ್ಯವನ್ನು ನಂಬಿಕೊಂಡಿರುವುದು ದುರಂತ. ಕಾಸರಗೋಡು ಜಿಲ್ಲೆಯೊಂದರಲ್ಲಿಯೇ ಕರ್ನಾಟಕದ ಒಟ್ಟು ಕೊರೋನಾ ರೋಗಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಗಡಿಯನ್ನು ತೆರೆದರೆ ಕಾಸರಗೋಡಿನಿಂದ ಖಂಡಿತವಾಗಿಯೂ ಮಂಗಳೂರಿಗೆ ಚಿಕಿತ್ಸೆಗೆ ಬರುತ್ತಾರೆ, ಆಗ ಇಲ್ಲಿರುವವರಿಗೆ ತೊಂದರೆಯಾಗುತ್ತದೆ ಎಂದು ಕರ್ನಾಟಕದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಮತ್ತು ಕಾಸರಗೋಡಿನ ಜನತೆ ಉತ್ತಮ ಸಂಬಂಧ ಹೊಂದಿದ್ದಾರೆ. ಈ ಸಂದರ್ಭದಲ್ಲಿ ಪಿನರಾಯಿ ಅವರು ಅದಕ್ಕೆ ಅಡ್ಡಗಾಲು ಹಾಕಬಾರದು. ಅದರ ಬದಲಿಗೆ ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಮಾಡಿ ಕಾಸರಗೋಡಿನಲ್ಲಿ ಸುಸಜ್ಜಿತ ಆಸ್ಪತ್ರೆ ತೆರೆಯುವಂತೆ ಮನವಿ ಮಾಡಲಿ ಎಂದಿದ್ದಾರೆ.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ಮೂಲಭೂತ ಅವಶ್ಯಕತೆಯಾಗಿರುವ ಆರೋಗ್ಯ ಸೇವೆಗೆ ಕಾಸರಗೋಡಿನ ಮಂದಿ ಮಂಗಳೂರನ್ನು ಅವಲಂಬಿಸಿದ್ದಾರೆ. ಕೇರಳ ಮುಖ್ಯಮಂತ್ರಿಗಳು ಎಂತಹ ಅಭಿವೃದ್ಧಿಪರ ಕೆಲಸಗಳನ್ನು ಮಾಡುತ್ತಿದ್ದಾರೆ, ಈ ಸಂದರ್ಭದಲ್ಲಿ ಗಡಿಭಾಗವನ್ನು ಖಂಡಿತಾ ತೆರೆಯಲು ಸಾಧ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT