ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ 
ರಾಜ್ಯ

ಕರ್ನಾಟಕ-ಕೇರಳ ಗಡಿ ಬಂದ್: ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರ ವೈಫಲ್ಯ ಎಂದ ಬಿಜೆಪಿ

ಕರ್ನಾಟಕ-ಕೇರಳ ಗಡಿಭಾಗವನ್ನು ಮುಚ್ಚಿರುವ ಬಗ್ಗೆ ಕೇರಳ ಮತ್ತು ಕರ್ನಾಟಕ ಸರ್ಕಾರಗಳ ಮಧ್ಯೆ ವಾದ-ವಿವಾದಗಳ ಮುಂದುವರಿದಿರುವಾಗ ಬಿಜೆಪಿ ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ ಎನ್ನಲಾಗುತ್ತಿದೆ.

ಮಂಗಳೂರು:ಕರ್ನಾಟಕ-ಕೇರಳ ಗಡಿಭಾಗವನ್ನು ಮುಚ್ಚಿರುವ ಬಗ್ಗೆ ಕೇರಳ ಮತ್ತು ಕರ್ನಾಟಕ ಸರ್ಕಾರಗಳ ಮಧ್ಯೆ ವಾದ-ವಿವಾದಗಳ ಮುಂದುವರಿದಿರುವಾಗ ಬಿಜೆಪಿ ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ ಎನ್ನಲಾಗುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಜಿಲ್ಲೆಯ ಬಿಜೆಪಿ ಶಾಸಕರು ಸೋಷಿಯಲ್ ಮೀಡಿಯಾದಲ್ಲಿ #SaveKarnatakafromPinarayi  ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಅಭಿಯಾನ ಆರಂಭಿಸಿದ್ದು ಕೇರಳ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಕೇರಳದಲ್ಲಿ ಆರೋಗ್ಯ ಸೇವೆ ಅಸಮರ್ಪಕವಾಗಿದ್ದು ಇದರಿಂದಾಗಿ ಅಲ್ಲಿನ ಜನರು ಮಂಗಳೂರನ್ನು ಅವಲಂಬಿಸಬೇಕಾಗಿ ಬಂದಿದೆ ಎಂದು ಆರೋಪಿಸುತ್ತಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ಗಡಿಯನ್ನು ತೆರೆದು ಕೇರಳದಲ್ಲಿನ ರೋಗಿಗಳು ಮಂಗಳೂರಿಗೆ ಬಂದು ಚಿಕಿತ್ಸೆ ಪಡೆಯಲು ಅವಕಾಶ ಮಾಡಿಕೊಡಿ ಎಂದು ಕೇಳುತ್ತಿರುವುದು ಮೂರ್ಖತನ, ರಾಜ್ಯವೊಂದು ಆರೋಗ್ಯ ಸೇವೆಗೆ ಬೇರೆ ರಾಜ್ಯವನ್ನು ನಂಬಿಕೊಂಡಿರುವುದು ದುರಂತ. ಕಾಸರಗೋಡು ಜಿಲ್ಲೆಯೊಂದರಲ್ಲಿಯೇ ಕರ್ನಾಟಕದ ಒಟ್ಟು ಕೊರೋನಾ ರೋಗಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಗಡಿಯನ್ನು ತೆರೆದರೆ ಕಾಸರಗೋಡಿನಿಂದ ಖಂಡಿತವಾಗಿಯೂ ಮಂಗಳೂರಿಗೆ ಚಿಕಿತ್ಸೆಗೆ ಬರುತ್ತಾರೆ, ಆಗ ಇಲ್ಲಿರುವವರಿಗೆ ತೊಂದರೆಯಾಗುತ್ತದೆ ಎಂದು ಕರ್ನಾಟಕದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಮತ್ತು ಕಾಸರಗೋಡಿನ ಜನತೆ ಉತ್ತಮ ಸಂಬಂಧ ಹೊಂದಿದ್ದಾರೆ. ಈ ಸಂದರ್ಭದಲ್ಲಿ ಪಿನರಾಯಿ ಅವರು ಅದಕ್ಕೆ ಅಡ್ಡಗಾಲು ಹಾಕಬಾರದು. ಅದರ ಬದಲಿಗೆ ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಮಾಡಿ ಕಾಸರಗೋಡಿನಲ್ಲಿ ಸುಸಜ್ಜಿತ ಆಸ್ಪತ್ರೆ ತೆರೆಯುವಂತೆ ಮನವಿ ಮಾಡಲಿ ಎಂದಿದ್ದಾರೆ.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ಮೂಲಭೂತ ಅವಶ್ಯಕತೆಯಾಗಿರುವ ಆರೋಗ್ಯ ಸೇವೆಗೆ ಕಾಸರಗೋಡಿನ ಮಂದಿ ಮಂಗಳೂರನ್ನು ಅವಲಂಬಿಸಿದ್ದಾರೆ. ಕೇರಳ ಮುಖ್ಯಮಂತ್ರಿಗಳು ಎಂತಹ ಅಭಿವೃದ್ಧಿಪರ ಕೆಲಸಗಳನ್ನು ಮಾಡುತ್ತಿದ್ದಾರೆ, ಈ ಸಂದರ್ಭದಲ್ಲಿ ಗಡಿಭಾಗವನ್ನು ಖಂಡಿತಾ ತೆರೆಯಲು ಸಾಧ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT