ಪೊಲೀಸರತ್ತ ಕಲ್ಲು ತೂರುತ್ತಿರುವ ಜನ 
ರಾಜ್ಯ

ಹುಬ್ಬಳ್ಳಿಯಲ್ಲಿ ಯುವಕರಿಂದ ಪೊಲೀಸರತ್ತ ಕಲ್ಲುತೂರಾಟ

ದೇಶದಲ್ಲಿ ಏಪ್ರಿಲ್ 14ರ ವರೆಗೆ ಲಾಕ್ ಡೌನ್ ಘೋಷಿಸಲಾಗಿದ್ದು, ಜನ ಜಮಾಣೆಗೊಳ್ಳದಂತೆ ಸೂಚಿಸಿರುವುದನ್ನು ಲೆಕ್ಕಿಸಿದ ಯುವಕರು ಪೊಲೀಸರತ್ತ ಕಲ್ಲು ತೂರಾಟ ಮಾಡಿರುವ ಘಟನೆ ವರದಿಯಾಗಿದೆ.

ಹುಬ್ಬಳ್ಳಿ: ದೇಶದಲ್ಲಿ ಏಪ್ರಿಲ್ 14ರ ವರೆಗೆ ಲಾಕ್ ಡೌನ್ ಘೋಷಿಸಲಾಗಿದ್ದು, ಜನ ಜಮಾಣೆಗೊಳ್ಳದಂತೆ ಸೂಚಿಸಿರುವುದನ್ನು ಲೆಕ್ಕಿಸಿದ ಯುವಕರು ಪೊಲೀಸರತ್ತ ಕಲ್ಲು ತೂರಾಟ ಮಾಡಿರುವ ಘಟನೆ ವರದಿಯಾಗಿದೆ.

ಇಲ್ಲಿನ ಮಂಟೂರ್ ರೋಡ್ ಹತ್ತಿರದ ಅರಳಿಕಟ್ಟಿ ಕಾಲೋನಿ ಬಳಿ ನಮಾಜ್ ಮಾಡುವ ವಿಷಯಕ್ಕೆ ಸಂಬಂಧಿಸಿದ್ದಂತೆ ಗಲಾಟೆ ನಡೆದಿದೆ. ಅಲ್ಲದೇ ಪೊಲೀಸರ ಮೇಲೆ ಸ್ಥಳಿಯ ಮುಸ್ಲಿಂ ಯುವಕರು ಕಲ್ಲುತೂರಾಟ ನಡೆಸಿರುವ ಘಟನೆ ನಡೆದಿದ್ದು, ಪ್ರತಿಯೊಂದು ದೃಶ್ಯಗಳನ್ನು ಸ್ಥಳೀಯರೊಬ್ಬರು  ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

ಜನಜಮಾವಣೆಯಿಂದ ನಮಾಜ್ ಮಾಡುತ್ತಿರುವ ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಿಸಿದರು. ಇದೇ ವೇಳೆ ಮಾತಿನ ಚಕಮಕಿ ನಡೆದಿದೆ. ಯುವಕರು ಏಕಾಏಕಿ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಂಭೀರವಾಗಿ  ಗಾಯಗೊಂಡಿದ್ದು, ಕಿಮ್ಸ್ ಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT