ಡಾ.ಅಶ್ವತ್ಥನಾರಾಯಣ 
ರಾಜ್ಯ

ಪತ್ರಕರ್ತರಿಗೂ ವಿಮಾ ಸೌಲಭ್ಯ: ಕೇಂದ್ರಕ್ಕೆ ಶಿಫಾರಸ್ಸು ಮಾಡುವೆನೆಂದ ಡಿಸಿಎಂ ಡಾ.ಅಶ್ವತ್ಥನಾರಾಯಣ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಜಿಲ್ಲಾ, ಪ್ರಾದೇಶಿಕ ಪತ್ರಿಕೆಗಳಿಗೂ ಕೂಡಲೇ ಜಾಹೀರಾತು ಬಿಡುಗಡೆ ಮಾಡುವಂತೆ ವಾರ್ತಾ ಇಲಾಖೆಗೆ ಸೂಚಿಸಿದ್ದಾರೆ. 

ಬೆಂಗಳುರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಜಿಲ್ಲಾ, ಪ್ರಾದೇಶಿಕ ಪತ್ರಿಕೆಗಳಿಗೂ ಕೂಡಲೇ ಜಾಹೀರಾತು ಬಿಡುಗಡೆ ಮಾಡುವಂತೆ ವಾರ್ತಾ ಇಲಾಖೆಗೆ ಸೂಚಿಸಿದ್ದಾರೆ.

ವಾರ್ತಾ ಭವನದ ಮಹಾತ್ಮಾ ಗಾಂಧಿ ಮಾಧ್ಯಮ ಕೇಂದ್ರದಲ್ಲಿ ನೂತನವಾಗಿ ರೂಪಿಸಲಾಗಿರುವ 'ದಾಸೋಹ' ಕಂಟ್ರೋಲ್ ರೂಂಗೆ ಚಾಲನೆ ನೀಡಲಾಯಿತು. 

ಕೆಯುಡಬ್ಲ್ಯೂಜೆ ಮನವಿ ಬಗ್ಗೆ ವಾರ್ತಾ ಇಲಾಖೆಯ ಅಧಿಕಾರಿಗಳಿಗೆ ಗಮನ ಸೆಳೆದ ಡಿಸಿಎಂ ಡಾ.ಅಶ್ವಥ್ ನಾರಾಯಣ್ , ಪತ್ರಿಕೆಗಳನ್ನು ನಡೆಸುವುದು ಕಷ್ಟವಿದೆ. ಈ ಕಷ್ಟದ ಹೊತ್ತಿನಲ್ಲಿ ಕರೊನಾ ಜಾಗೃತಿ ಸೇರಿದಂತೆ ಸರ್ಕಾರದ ಜಾಹೀರಾತು ಕೊಡುವಂತೆ ಆದೇಶಿಸಿದರು.

ಸ್ಥಳದಲ್ಲಿಯೇ ಇದ್ದ ವಾರ್ತಾ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಅವರು ವಾರ್ತಾ ಇಲಾಖೆಯ ಆಯುಕ್ತ ಸಿದ್ದರಾಮಪ್ಪ ಅವರಿಗೆ ಜಾಹೀರಾತು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ

ಪತ್ರಕರ್ತರನ್ನು ಕೇಂದ್ರ ಸರ್ಕಾರದ ವಿಮಾ ಯೋಜನೆ ವ್ಯಾಪ್ತಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಸಂಘ ಸಲ್ಲಿಸಿದ ಮನವಿಯನ್ನು ಪರಿಗಣಿಸಿ ದ ಉಪಮುಖ್ಯಮಂತ್ರಿ ಡಾ‌ಅಶ್ವಥ್ ನಾರಾಯಣ ಅವರು ರಾಜ್ಯ ಸರ್ಕಾರದಿಂದಲೂ ಈ ಬಗ್ಗೆ ಶಿಫಾರಸ್ಸು ಮಾಡುವ ಭರವಸೆಯನ್ನು ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT