ಮಾರುಕಟ್ಟೆ ವೀಕ್ಷಣೆ ನಡೆಸಿದ ಸಚಿವ ಬಿಸಿ ಪಾಟೀಲ್ ಟೀಂ 
ರಾಜ್ಯ

ಮಾರುಕಟ್ಟೆ ವೀಕ್ಷಣೆ ನಡೆಸಿದ ಸಚಿವ ಬಿಸಿ ಪಾಟೀಲ್ ಟೀಂ: ಕೃಷಿ ಚಟುವಟಿಕೆಗಳಿಗೆ ತೊಂದರೆ ಮಾಡದಂತೆ  ತಾಕೀತು

ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಬೆಳ್ಳಂಬೆಳಿಗ್ಗೆ ತೋಟಗಾರಿಕಾ ಸಚಿವ ನಾರಾಯಣಗೌಡ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ತರಕಾರಿ ಮತ್ತು ಈರುಳ್ಳಿ ಆಲೂಗಡ್ಡೆ ಮಾರುಕಟ್ಟೆಗಳಿಗೆ ಭೇಟಿ

ಬೆಂಗಳೂರು:  ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಬೆಳ್ಳಂಬೆಳಿಗ್ಗೆ ತೋಟಗಾರಿಕಾ ಸಚಿವ ನಾರಾಯಣಗೌಡ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ತರಕಾರಿ ಮತ್ತು ಈರುಳ್ಳಿ ಆಲೂಗಡ್ಡೆ ಮಾರುಕಟ್ಟೆಗಳಿಗೆ ಭೇಟಿ ನೀಡಿದರು.

ಅಲ್ಲದೇ ಬ್ಯಾಟರಾಯನಪುರ ಹಾಗೂ ದಾಸನಪುರ ಮಾರುಕಟ್ಟೆ ಪ್ರಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಸಾಮಾಜಿಕ ಅಂತರ ಎನ್ನುವುದು ಸ್ವಯಂ ಪ್ರೇರಣೆಯಾಗಬೇಕು. ಸಾಮಾಜಿಕ ತುರ್ತು ಪರಿಸ್ಥಿತಿ ಇದಾಗಿರುವುದರಿಂದ ನಮ್ಮಷ್ಟಕ್ಕೆ ನಾವು ನಿಬಂಧನೆ ಹಾಕಿಕೊಳ್ಳಬೇಕು. ಪೊಲೀಸರಿಂದಾಗಲೀ ಅಥವಾ ಸರ್ಕಾರದ ಒತ್ತಾಯವಾಗಿ ಆಗಲೀ ಆಗಬಾರದು. ಸಾಮಾಜಿಕ ಅಂತರ ಎನ್ನುವುದು ಕೊರೊನಾ ಮಹಾಮಾರಿಯ ವಿರುದ್ಧ ಸಮರ ಸಾರಲು ಇರುವ ಏಕೈಕ ಪರಿಹಾರ. ಜನರ ಹಾಗೂ ಸಾಮಾಜಿಕ ಆರೋಗ್ಯದ ಹಿತದೃಷ್ಟಿಯಿಂದಲೇ ಸಾಮಾಜಿಕ ಅಂತರ ಲಾಕ್‌ಡೌನ್‌ಗೆ ಕರೆ ನೀಡಲಾಗಿದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT