ರಾಜ್ಯ

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ: ಏ.14ರವರೆಗೆ ರಸೆಲ್ ಮಾರುಕಟ್ಟೆ ಬಂದ್

Manjula VN

ಬೆಂಗಳೂರು: ನಗರದ ರಸೆಲ್ ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿನ ವ್ಯಾಪಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಏ.14ರವರೆಗೆ ರಸೆಲ್ ಮಾರುಕಟ್ಟೆಯನ್ನು ಬಂದ್ ಮಾಡಲಾಗಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಮೇಯರ್ ಎಂ.ಗೌತಮ್ ಕುಮಾರ್ ಅವರು, ಸಾಮಾಜಿಕ ಅಂತರ ಎಂಬ ನಿಯಮವನ್ನು ಪಾಲನೆ ಮಾಡಲಾಗುತ್ತಿಲ್ಲ. ಹೀಗಾಗಿ ಶಿವಾಜಿನಗರದ ರಸೆಲ್ ಮಾರುಕಟ್ಟೆಯನ್ನು ಏಪ್ರಿಲ್ 14ರವರೆಗೆ ಬಂದ್ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. 

ವೈರಸ್ ನಿಂದ ದೂರ ಉಳಿಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಆದರೆ, ಜನರು    ನಿಯಮ ಪಾಲನೆ ಮಾಡುತ್ತಿಲ್ಲ ಈಗಾಗಲೇ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ಸಾಕಷ್ಟು ದೇಶಗಳಲ್ಲಿ ಕೊರೋನಾ ರುದ್ರತಾಂಡವವಾಡುತ್ತಿದೆ.

SCROLL FOR NEXT