ರಾಜ್ಯ

ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಗೃಹಿಣಿ ಆತ್ಮಹತ್ಯೆ

Raghavendra Adiga

ಬಂಟ್ವಾಳ: ಷುಲ್ಲಕ ಕಾರಣಕ್ಕೆ ಗೃಹಿಣಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಕೈಕಂಬ ಸಮೀಪದ ಪೆರ್ಲ ಎಂಬಲ್ಲಿ ಶನಿವಾರ ನಡೆದಿದೆ.

ತುಂಬೆ ನಿವಾಸಿ ಅಬ್ಬಾಸ್ ಅಲಿ ಎಂಬವರ ಪತ್ನಿ ರಮೀಝಾ ಬಾನು(29) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಂಪತಿಗೆ ಮೂವರು ಮಕ್ಕಳಿದ್ದು, ತುಂಬೆ ನಿವಾಸಿಯಾಗಿದ್ದ ಇವರು ಕೆಲ ಸಮಯದ ಹಿಂದೆಷ್ಟೆ ಪೆರ್ಲದಲ್ಲಿ ಬಾಡಿಗೆಗೆ ಮನೆ ಪಡೆದು ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಯಾಗಿಲ್ಲ. ಆದರೆ ಲಾಕ್ ಡೌನ್ ಇದ್ದ ವೇಳೆ ಆಟೋ ಚಾಲಕನಾಗಿದ್ದ ಪತಿ ಅಬ್ಬಾಸ್ ಆಟೋ ಚಲಾಯಿಸಿಕೊಂಡು ಹೊರ ಹೋಗಿದ್ದಾರೆ. ಇದರಿಂದ ಬೇಸರಗೊಂಡ ರಮೀಝಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT