ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆ,12 ಜನ ಡಿಸ್ಚಾರ್ಜ್ - ಹೆಲ್ತ್ ಬುಲೆಟಿನ್

ರಾಜ್ಯದಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ರಾಜ್ಯ ಸರ್ಕಾರ ಇಂದು ಸಂಜೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಒಟ್ಟು 151 ಜನರಿಗೆ ಈ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 12 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ರಾಜ್ಯ ಸರ್ಕಾರ ಇಂದು ಸಂಜೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಒಟ್ಟು 151 ಜನರಿಗೆ ಈ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 12 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸೋಂಕು ಪೀಡಿತ  135 ವ್ಯಕ್ತಿಗಳಲ್ಲಿ 132 ಮಂದಿ ಗೊತ್ತುಪಡಿಸಿದ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ  ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಮೂವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ. ನಿನ್ನೆ ಸಂಜೆಯಿಂದ  ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ ಏಳು ಹೊಸ ಕೋವಿಡ್-19 ಸೋಂಕಿತರು ಪತ್ತೆಯಾಗಿದ್ದಾರೆ.

ದುಬೈಗೆ ಪ್ರಯಾಣ ಮಾಡಿ ಮಾರ್ಚ್ 22 ರಂದು ಭಾರತಕ್ಕೆ ಆಗಮಿಸಿರುವ ಬೆಂಗಳೂರಿನ  68 ವರ್ಷದ  ಪುರುಷ ಹಾಗೂ ಮಹಿಳೆಯರೊಬ್ಬರು ಸೋಂಕಿಗೆ ತುತ್ತಾಗಿದ್ದು, ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಆಕಾಶ್ ಆಸ್ಪತ್ರೆಯಲ್ಲಿ ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ. 

ದೆಹಲಿಯಲ್ಲಿ ನಡೆದ  ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಮಾರ್ಚ್ 20 ರಂದು ಹಿಂತಿರುಗಿರುವ ಬೆಳಗಾವಿ ಜಿಲ್ಲೆಯ ರಾಯ್ ಭಾಗ್ ನ 36 ವರ್ಷದ ಮಹಿಳೆಯೊಬ್ಬರಲ್ಲಿ ಸೋಂಕು ಪತ್ತೆಯಾಗಿದ್ದು, ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ  ಪ್ರತ್ಯೇಕವಾಗಿರಿಸಲಾಗಿದೆ. 

ರಾಜ್ಯದಲ್ಲಿ ಒಟ್ಟು ಪತ್ತೆ ಮಾಡಲಾಗಿರುವ 151 ಪ್ರಕರಣಗಳಲ್ಲಿ 8 ಪ್ರಕರಣಗಳು ಕೇರಳದವರಾಗಿದ್ದು, ಅವರು ಕರ್ನಾಟಕದ ವಿಮಾನ ನಿಲ್ದಾಣಗಳಿಗೆ ಆಗಮಿಸಿ, ಇಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ದಿನ ಮಂಗಳೂರಿನಲ್ಲಿ 86 ಜನರನ್ನು ಮಂಗಳೂರು ಕಡಲು ಬಂದರಿನಲ್ಲಿ ತಪಾಸಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!