ರಾಜ್ಯ

ಲಾಕ್ ಡೌನ್ ಮಧ್ಯೆ ಹಸಿದ ಹೊಟ್ಟೆ ತುಂಬಿಸುತ್ತಿರುವ ಕಾರ್ಯಕರ್ತರಿವರು!

ಕಳೆದೊಂದು ವಾರದಿಂದ Our National Welfare Trust ಅಡಿಯಲ್ಲಿ 6 ಮಂದಿ ಕಾರ್ಯಕರ್ತರು ಬೆಂಗಳೂರಿನ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಕೊರೋನಾ ರೋಗಿಗಳನ್ನು ನೋಡಿಕೊಳ್ಳುತ್ತಿರುವವರಿಗೆ ಆಸ್ಪತ್ರೆಗಳಿಗೆ ಹೋಗಿ ಆಹಾರ ಒದಗಿಸುತ್ತಿದ್ದಾರೆ.

ಬೆಂಗಳೂರು: ಕಳೆದೊಂದು ವಾರದಿಂದ Our National Welfare Trust ಅಡಿಯಲ್ಲಿ 6 ಮಂದಿ ಕಾರ್ಯಕರ್ತರು ಬೆಂಗಳೂರಿನ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಕೊರೋನಾ ರೋಗಿಗಳನ್ನು ನೋಡಿಕೊಳ್ಳುತ್ತಿರುವವರಿಗೆ ಆಸ್ಪತ್ರೆಗಳಿಗೆ ಹೋಗಿ ಆಹಾರ ಒದಗಿಸುತ್ತಿದ್ದಾರೆ.

ಪ್ರಾಯೋಗಿಕವಾಗಿ ಆರಂಭಿಸಲಾದ ಈ ಕೆಲಸ ಇಂದು ಹಲವರ ಹೊಟ್ಟೆ ತುಂಬಿಸುತ್ತಿದೆ. ಅನೇಕ ನಿರ್ಗತಿಕರಿಗೆ ಈ ಕಾರ್ಯಕರ್ತರು ಊಟ, ತಿಂಡಿ ಒದಗಿಸುತ್ತಿದ್ದಾರೆ.

ಕೆಲವು ಆಸ್ಪತ್ರೆಗಳಲ್ಲಿ ಕ್ಯಾಂಟೀನ್ ಬಂದ್ ಆಗಿರುವುದರಿಂದ ರೋಗಿಗಳಿಗೆ ಆಹಾರ ಒದಗಿಸುವವರು ಬೇಕಾಗುತ್ತದೆ. ಊಟ ತಿಂಡಿ ಮಾಡಲು ಎಲ್ಲಿಗೆ ಹೋಗುವುದು, ಹೊರಗಡೆ ಎಲ್ಲವೂ ಬಂದ್ ಎಂದು ಹಸಿವೆಯಿಂದ ಬಳಲುತ್ತಿರುತ್ತಾರೆ. ಇನ್ನು ಹಲವರಿಗೆ ಆನ್ ಲೈನ್ ನಲ್ಲಿ ಫುಡ್ ಆರ್ಡರ್ ಮಾಡುವುದು ಹೇಗೆ ಎಂದು ಗೊತ್ತಿಲ್ಲ. ಇನ್ನು ಕೆಲವರಲ್ಲಿ ಹಣ ಇರುವುದಿಲ್ಲ. ಇಂಥ ಕಡೆಗಳಿಗೆ ಹೋಗಿ ಆಹಾರ ನೀಡುತ್ತೇವೆ ಎನ್ನುತ್ತಾರೆ ಐಟಿ ಕನ್ಸಲ್ಟೆಂಟ್ ಮತ್ತು ಕಾರ್ಯಕರ್ತ ಗುಂಪಿನ ಸದಸ್ಯ ಮೊಹಮ್ಮದ್ ಖಾಲಿದ್.

ಸರ್ಕಾರಿ ಆಸ್ಪತ್ರೆಗಳು ಮಾತ್ರವಲ್ಲದೆ ಕ್ವೀನ್ಸ್ ರಸ್ತೆಯ ಶಿಫಾ ಆಸ್ಪತ್ರೆಗೆ ಆಹಾರ ನೀಡಿದ್ದೇವೆ. ಅಲ್ಲಿರುವವರೆಗೆ ಬಹಳ ಸಹಾಯವಾಗಿದೆ. ನಗರದ ಕಿದ್ವಾಯಿ, ಬೌರಿಂಗ್, ವಿಕ್ಟೋರಿಯಾ ಮೊದಲಾದ ಆಸ್ಪತ್ರೆಗಳಲ್ಲಿರುವ ರೋಗಿಗಳಿಗೆ ನೀಡಿದ್ದೇವೆ ಎಂದರು.

500 ಪ್ಯಾಕೆಟ್ ದಾಲ್ ಅನ್ನ, ಪುಲಾವ್ ನ್ನು ಆಸ್ಪತ್ರೆಗಳಲ್ಲಿ ರೋಗಿಗಳ ಜೊತೆ ಇರುವವರಿಗೆ ನೀಡುತ್ತಿದ್ದು ಇದಕ್ಕೆ ಗುತ್ತಿಗೆದಾರರೊಬ್ಬರಿಗೆ ದಿನಂಪ್ರತಿ 15 ಸಾವಿರ ರೂಪಾಯಿ ದರ ವಿಧಿಸುತ್ತಾರೆ. ಈ ಕಾರ್ಯಕರ್ತರೇ ಗುತ್ತಿಗೆದಾರರಿಗೆ ಹಣ ನೀಡುತ್ತಾರಂತೆ.

ಲಾಕ್ ಡೌನ್ ಮುಗಿಯುವವರೆಗೆ ಮುಂದುವರಿಸಿಕೊಂಡು ಹೋಗಬೇಕೆಂದುಕೊಂಡಿದ್ದೇವೆ. ಪೊಲೀಸರಿಂದ ವಾಹನ ಪಾಸ್ ಸಿಕ್ಕಿದ್ದು ಇದರಿಂದ ಆಸ್ಪತ್ರೆಗಳಿಗೆ ಹೋಗಿ ಆಹಾರ ನೀಡಲು ಸುಲಭವಾಗುತ್ತದೆ. ಆಸ್ಪತ್ರೆಗಳಲ್ಲದೆ ದಿನಗೂಲಿ ನೌಕರರು, ಕೊಳಗೇರಿ ಪ್ರದೇಶದಲ್ಲಿರುವವರಿಗೆ ಸಹ ಆಹಾರ ಒದಗಿಸುತ್ತೇವೆ ಎಂದು ಖಾಲಿದ್ ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT