ರಾಜ್ಯ

ಲಾಕ್‌ಡೌನ್ ಉಲ್ಲಂಘಿಸಿ ಅಪ್ರಾಪ್ತ ಮಗನಿಗೆ ಕಾರು ಚಾಲನೆ ಹೇಳಿಕೊಡುತ್ತಿದ್ದ ಪೋಷಕರಿಗೆ ರವಿ ಡಿ. ಚನ್ನಣ್ಣನವರ್ ​ಕ್ಲಾಸ್

ಕೊರೊನಾ ಸೋಂಕು ನಿಯಂತ್ರಣಕ್ಕೆ ಕಡಿವಾಣ ಹಾಕಲು ಘೋಷಿಸಿರುವ ಲಾಕ್​ಡೌನ್​ ನಿಯಮ‌‌ ಉಲ್ಲಂಘಿಸಿ ಮನೆಯಿಂದ ಹೊರಬಂದು ಅಪ್ರಾಪ್ತ ಮಗನಿಗೆ ಕಾರು ಚಾಲನೆ ಹೇಳಿಕೊಡುತ್ತಿದ್ದ ಪೋಷಕರಿಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ. ಚನ್ನಣ್ಣನವರ್ ​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ದೊಡ್ಡಬಳ್ಳಾಪುರ: ಕೊರೊನಾ ಸೋಂಕು ನಿಯಂತ್ರಣಕ್ಕೆ ಕಡಿವಾಣ ಹಾಕಲು ಘೋಷಿಸಿರುವ ಲಾಕ್​ಡೌನ್​ ನಿಯಮ‌‌ ಉಲ್ಲಂಘಿಸಿ ಮನೆಯಿಂದ ಹೊರಬಂದು ಅಪ್ರಾಪ್ತ ಮಗನಿಗೆ ಕಾರು ಚಾಲನೆ ಹೇಳಿಕೊಡುತ್ತಿದ್ದ ಪೋಷಕರಿಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ. ಚನ್ನಣ್ಣನವರ್ ​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ದೊಡ್ಡಬಳ್ಳಾಪುರ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಪೋಷಕರು ಅಪ್ರಾಪ್ತ ಮಗನಿಗೆ ಡ್ರೈವಿಂಗ್​ ಹೇಳಿ ಕೊಡುತ್ತಿದ್ದುದನ್ನು ಗಮನಿಸಿದ ಎಸ್ಪಿ ರವಿ ಡಿ ಚನ್ನಣ್ಣನವರ್ ನಡು ರಸ್ತೆಯಲ್ಲಿ ಕಾರು ತಡೆದು ತಂದೆ-ತಾಯಿಗೆ ತರಾಟೆ ತೆಗೆದುಕೊಂಡಿದ್ದಾರೆ. ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿರದೇ ಹೊರಗೆ ಬಂದದ್ದು ತಪ್ಪು. ಅದರಲ್ಲೂ ಅಪ್ರಾಪ್ತ ಮಗನಿಗೆ ಕಾರು ಡ್ರೈವಿಂಗ್ ಹೇಳಿ ಕೊಡುತ್ತಿರುವುದು ಕಾನೂನುಬಾಹಿರ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಕರಣ ದಾಖಲಿಸಿ ಕಾರನ್ನು ವಶಕ್ಕೆ ಪಡೆಯುವಂತೆ ಸಿಬ್ಬಂದಿಗೆ ಸೂಚನೆ ನೀಡಿರುವ ಅವರು ಲಾಕ್ ಡೌನ್ ಮುಗಿಯುವವರೆಗೂ ಕಾರು ವಾಪಸ್ಸು ನೀಡುವುದಿಲ್ಲ‌ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT