ರಾಜ್ಯ

ಲಾಕ್‌ಡೌನ್ ಉಲ್ಲಂಘಿಸಿ ಅಪ್ರಾಪ್ತ ಮಗನಿಗೆ ಕಾರು ಚಾಲನೆ ಹೇಳಿಕೊಡುತ್ತಿದ್ದ ಪೋಷಕರಿಗೆ ರವಿ ಡಿ. ಚನ್ನಣ್ಣನವರ್ ​ಕ್ಲಾಸ್

ಕೊರೊನಾ ಸೋಂಕು ನಿಯಂತ್ರಣಕ್ಕೆ ಕಡಿವಾಣ ಹಾಕಲು ಘೋಷಿಸಿರುವ ಲಾಕ್​ಡೌನ್​ ನಿಯಮ‌‌ ಉಲ್ಲಂಘಿಸಿ ಮನೆಯಿಂದ ಹೊರಬಂದು ಅಪ್ರಾಪ್ತ ಮಗನಿಗೆ ಕಾರು ಚಾಲನೆ ಹೇಳಿಕೊಡುತ್ತಿದ್ದ ಪೋಷಕರಿಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ. ಚನ್ನಣ್ಣನವರ್ ​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ದೊಡ್ಡಬಳ್ಳಾಪುರ: ಕೊರೊನಾ ಸೋಂಕು ನಿಯಂತ್ರಣಕ್ಕೆ ಕಡಿವಾಣ ಹಾಕಲು ಘೋಷಿಸಿರುವ ಲಾಕ್​ಡೌನ್​ ನಿಯಮ‌‌ ಉಲ್ಲಂಘಿಸಿ ಮನೆಯಿಂದ ಹೊರಬಂದು ಅಪ್ರಾಪ್ತ ಮಗನಿಗೆ ಕಾರು ಚಾಲನೆ ಹೇಳಿಕೊಡುತ್ತಿದ್ದ ಪೋಷಕರಿಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ. ಚನ್ನಣ್ಣನವರ್ ​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ದೊಡ್ಡಬಳ್ಳಾಪುರ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಪೋಷಕರು ಅಪ್ರಾಪ್ತ ಮಗನಿಗೆ ಡ್ರೈವಿಂಗ್​ ಹೇಳಿ ಕೊಡುತ್ತಿದ್ದುದನ್ನು ಗಮನಿಸಿದ ಎಸ್ಪಿ ರವಿ ಡಿ ಚನ್ನಣ್ಣನವರ್ ನಡು ರಸ್ತೆಯಲ್ಲಿ ಕಾರು ತಡೆದು ತಂದೆ-ತಾಯಿಗೆ ತರಾಟೆ ತೆಗೆದುಕೊಂಡಿದ್ದಾರೆ. ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿರದೇ ಹೊರಗೆ ಬಂದದ್ದು ತಪ್ಪು. ಅದರಲ್ಲೂ ಅಪ್ರಾಪ್ತ ಮಗನಿಗೆ ಕಾರು ಡ್ರೈವಿಂಗ್ ಹೇಳಿ ಕೊಡುತ್ತಿರುವುದು ಕಾನೂನುಬಾಹಿರ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಕರಣ ದಾಖಲಿಸಿ ಕಾರನ್ನು ವಶಕ್ಕೆ ಪಡೆಯುವಂತೆ ಸಿಬ್ಬಂದಿಗೆ ಸೂಚನೆ ನೀಡಿರುವ ಅವರು ಲಾಕ್ ಡೌನ್ ಮುಗಿಯುವವರೆಗೂ ಕಾರು ವಾಪಸ್ಸು ನೀಡುವುದಿಲ್ಲ‌ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT