ರಾಜ್ಯ

ಕರ್ತವ್ಯ ನಿರತ ಪೊಲೀಸರಿಗೆ ಬೆದರಿಕೆ: ಇಬ್ಬರು ರಿಯಲ್ ಎಸ್ಟೇಟ್ ಏಜೆಂಟ್ ಗಳ ಬಂಧನ

Shilpa D

ಬೆಂಗಳೂರು: ಕರ್ತವ್ಯ ನಿರತ ಪೊಲೀಸರಿಗೆ ಬೆದರಿಕೆ ಹಾಕಿದ್ದ ಸಂಬಂಧ ದೇವನಹಳ್ಳಿ ಪೋಲೀಸರು ಇಬ್ಬರು ರಿಯಲ್ ಎಸ್ಟೇಟ್ ಏಜೆಂಟ್ ಗಳನ್ನು ಬಂಧಿಸಿದ್ದಾರೆ.

ದೇವನಹಳ್ಳಿಯ ರಾಣಿ ಚೆಕ್ ಪೋಸ್ಟ್ ಬಳಿ ಆರೋಪಿಗಳು ಬರುತ್ತಿದ್ದ ಎಸ್ ಯುವಿ ವಾಹನವನ್ನು ಪೊಲೀಸರು ತಡೆದಿದ್ದಾರೆ,  ಲಾಕ್ ಡೌನ್ ಇದ್ದ ಹಿನ್ನೆಲೆಯಲ್ಲಿ ಪೊಲೀಸರು ತಡೆದು ಪ್ರಶ್ನಿಸಿದ್ದಾರೆ. 

ಇದರಿಂದ ಕೋಪಗೊಂಡ ಇಬ್ಬರು ತಾವು ಪ್ರಭಾವಿ ಶಾಲಿ ಸಚಿವರುಗಳ ಕಡೆಯವರೆಂದು ನಾಳೆ ಬೆಳಗ್ಗೆ ಇಲ್ಲಿರುವ ಎಲ್ಲಾ ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಿಸುವುದಾಗಿ ಬೆದರಿಕೆ ಹಾಕಿದ್ದರು.

ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ರಾಮಕೃಷ್ಣ ಮತ್ತು ವೆಂಕಟೇಗೌಡ ಎಂಬ ಇಬ್ಬರನ್ನು ಬಂಧಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ.

SCROLL FOR NEXT