ಆರ್ಚ್ ಬಿಷಪ್ ಡಾ.ಪೀಟರ್ ಮಾಚಾಡೋ 
ರಾಜ್ಯ

ಬೆಂಗಳೂರು: ಮನೆಯಲ್ಲೇ ಗುಡ್ ಫ್ರೈಡೆ ಆಚರಿಸಲು ಆರ್ಚ್ ಬಿಷಪ್ ಮನವಿ

ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್‌ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಗುಡ್ ಫ್ರೈಡೆಯನ್ನು ಮನೆಯಲ್ಲಿಯೇ ಆಚರಿಸುವಂತೆ ಆರ್ಚ್ ಬಿಷಪ್ ಡಾ.ಪೀಟರ್ ಮಾಚಾಡೋ ಅವರು ಕ್ರೈಸ್ತ ಬಾಂಧವರಲ್ಲಿ ಮನವಿ ಮಾಡಿದ್ದಾರೆ

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್‌ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಗುಡ್ ಫ್ರೈಡೆಯನ್ನು ಮನೆಯಲ್ಲಿಯೇ ಆಚರಿಸುವಂತೆ ಆರ್ಚ್ ಬಿಷಪ್ ಡಾ.ಪೀಟರ್ ಮಾಚಾಡೋ ಅವರು ಕ್ರೈಸ್ತ ಬಾಂಧವರಲ್ಲಿ ಮನವಿ ಮಾಡಿದ್ದಾರೆ

ಏ.10ರಂದು ಗುಡ್ ಫ್ರೈಡೆ ಇರುವ ಹಿನ್ನೆಲೆಯಲ್ಲಿ ಮಂಗಳವಾರ ಜಯಮಹಲ್‌ನ ನಿವಾಸದಲ್ಲಿ ಆರ್ಚ್ ಬಿಷಪ್ ಡಾ.ಪೀಟರ್ ಮಾಚಾಡೋ ಅವರನ್ನು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹಾಗೂ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಅವರು ಭೇಟಿ ಮಾಡಿ ಚರ್ಚ್‌ನಲ್ಲಿ ಜನತೆ ಸೇರದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದರು.

ಆಯುಕ್ತರ ಮನವಿಗೆ ಸ್ಪಂದಿಸಿದ ಆರ್ಚ್ ಬಿಷಪ್ ಅವರು, ಲಾಕ್‌ಡೌನ್ ಜಾರಿಯಾದಾಗಿನಿಂದ ಯಾವ ಚರ್ಚ್‌ಗಳ ಬಾಗಿಲು ತೆರೆದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟಸಾಧ್ಯವಾಗಿರುವುದರಿಂದ ಗುಡ್ ಫ್ರೈಡ್ ದಿನ ಕೂಡ ಯಾವ ಚರ್ಚ್‌ಗಳ ಬಾಗಿಲು ತೆಗೆಯುವುದಿಲ್ಲ ಎಂದು ಭರವಸೆ ನೀಡಿದರು.

ಇನ್ನು, ಗುಡ್ ಫ್ರೈಡ್ ದಿನದಂದು ಹಬ್ಬ ಆಚರಣೆ ಮಾಡುವ ವಿಧಾನವನ್ನು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಲಿದ್ದೇವೆ. ಅದನ್ನು ನೋಡಿ ಬಾಂಧವರು ಮನೆಯಲ್ಲಿಯೇ ಕುಟುಂಬಸ್ಥರೊಂದಿಗೆ ಗುಡ್ ಫ್ರೈಡ್ ಆಚರಿಸಿ ಪ್ರಾರ್ಥನೆ ಸಲ್ಲಿಸುವಂತೆ ಅವರು ಮನವಿ ಮಾಡಿದ್ದಾರೆ.
ಅಂದು ನಗರ ಸೇರಿ ರಾಜ್ಯದ ಯಾವುದೇ ಭಾಗದ ಚರ್ಚ್ ಬಾಗಿಲು ತೆರೆಯುವುದಿಲ್ಲ. ಈಗಾಗಲೇ ಕ್ರೈಸ್ತ ಬಾಂಧವರಲ್ಲಿ ಮನವಿ ಮನೆಯಲ್ಲಿಯೇ ಹಬ್ಬ ಆಚರಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT