ಭಾಸ್ಕರ್ ರಾವ್ 
ರಾಜ್ಯ

ಶಬೇ ಬರಾಅತ್, ಗುಡ್‌ಫ್ರೈಡೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ; ಉಲ್ಲಂಘಿಸಿದ್ರೆ ಮುಲಾಜಿಲ್ಲದೆ ಕಠಿಣ ಕ್ರಮ: ಭಾಸ್ಕರ್ ರಾವ್

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಶಬೆ ಬರಾಅತ್ ಹಾಗೂ ಗುಡ್‌ಫ್ರೈಡೆಗಾಗಿ ಯಾರು ಕೂಡ ಮಸೀದಿ, ಚರ್ಚ್‌ಗಳಿಗೆ ತೆರಳದೆ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕು. ಅನಗತ್ಯವಾಗಿ ಚರ್ಚ್, ಮಸೀದಿಗಳಲ್ಲಿ ಸೇರಿದರೆ ಮುಲಾಜಿಲ್ಲದೆ ಬಂಧಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಶಬೆ ಬರಾಅತ್ ಹಾಗೂ ಗುಡ್‌ಫ್ರೈಡೆಗಾಗಿ ಯಾರು ಕೂಡ ಮಸೀದಿ, ಚರ್ಚ್‌ಗಳಿಗೆ ತೆರಳದೆ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕು. ಅನಗತ್ಯವಾಗಿ ಚರ್ಚ್, ಮಸೀದಿಗಳಲ್ಲಿ ಸೇರಿದರೆ ಮುಲಾಜಿಲ್ಲದೆ ಬಂಧಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ಆರ್ಚ್ ಬಿಷಪ್ ಮಚಾಡೊ ಅವರು ಗುಡ್ ಫ್ರೈಡೆ ಪ್ರಾರ್ಥನೆಗೆ ಚರ್ಚ್‌ಗೆ ಬರದಂತೆ ಮನೆಯಲ್ಲೇ ಆಚರಿಸುವಂತೆ ಮನವಿ ಮಾಡಿರುವುದು ಸ್ವಾಗತಾರ್ಹವಾಗಿದೆ. ಅದೇ ರೀತಿ ವಕ್ಫ್ ಮಂಡಳಿ ಕೂಡ ಶಬೇ ಬರಾಅತ್ ಅನ್ನು ಮನೆಯಲ್ಲಿಯೇ ಆಚರಿಸುವಂತೆ ಕರೆ ನೀಡಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ಲಾಕ್‌ಡೌನ್ ಉಲ್ಲಂಘಿಸಿ ನಗರದಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದ 17,384 ವಾಹನಗಳನ್ನು ನಗರ ಪೊಲೀಸರು ಇಲ್ಲಿಯವರೆಗೆ ವಶಪಡಿಸಿಕೊಂಡಿದ್ದಾರೆ. ಲಾಕ್‌ಡೌನ್ ಉಲ್ಲಂಘಿಸಿ ಅನಗತ್ಯವಾಗಿ ನಗರದ ವಿವಿಧೆಡೆ ಸಂಚರಿಸುತ್ತಿದ್ದ 16, 187 ಬೈಕ್‌ಗಳು, 554 ಆಟೋ, 646 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಅನಗತ್ಯ ವಾಹನ ಸಂಚಾರವನ್ನು ತಡೆಯಲು ನಗರದ ಬಹುತೇಕ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು ವಶಪಡಿಸಿಕೊಂಡಿರುವ ವಾಹನಗಳನ್ನು ಲಾಕ್‌ಡೌನ್ ಮುಗಿಯುವವರೆಗೆ ಅವುಗಳನ್ನು ವಾಪಸ್ ನೀಡುವುದಿಲ್ಲ ಎಂದು ಭಾಸ್ಕರ್ ರಾವ್ ತಿಳಿಸಿದ್ದಾರೆ.

ಮನೆಯ ಸುತ್ತಮುತ್ತ ಅಗತ್ಯ ವಸ್ತುಗಳಿಗೆ ವಾಹನ ತೆಗೆದುಕೊಂಡು ಹೋಗುವವರನ್ನು ಬಿಟ್ಟು ಅನಗತ್ಯವಾಗಿ ಒಂದು ಕಡೆಯಿಂದ ಮತ್ತೊಂದು ಕಡೆ ಹೋಗುವ ವಾಹನ ಸವಾರರನ್ನು ತಡೆದು ಮುಲಾಜಿಲ್ಲದೆ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದು ತಿಳಿಸಿದರು.

ನಗರದ ಪೂರ್ವ-ಪಶ್ಚಿಮ, ಉತ್ತರ-ದಕ್ಷಿಣ, ಕೇಂದ್ರ-ಆಗ್ನೇಯ, ಈಶಾನ್ಯ ಹಾಗೂ ವೈಟ್‌ಫೀಲ್ಡ್ ಉಪ ವಿಭಾಗಗಳಲ್ಲಿ ವಾಹನ ತಪಾಸಣೆಯನ್ನು ಬಿಗಿಗೊಳಿಸಲಾಗಿದೆ. ಯಾರೂ ಅನಗತ್ಯವಾಗಿ ವಾಹನಗಳನ್ನು ರಸ್ತೆಗೆ ತರದಂತೆ ಎಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ಅಗತ್ಯ ಸೇವೆಗಳಿಗೆ ಪಾಸ್ ಪಡೆದಿರುವವರು, ವೈದ್ಯಕೀಯ, ಅರೆವೈದ್ಯಕೀಯ ಸಿಬ್ಬಂದಿ ಸೇರಿ ಎಲ್ಲರೂ ಕಡ್ಡಾಯವಾಗಿ ಪಾಸ್‌ನ್ನು ತಪಾಸಣೆ ನಡೆಸುವ ಪೊಲೀಸರಿಗೆ ತೋರಿಸಬೇಕು ಎಂದು ತಿಳಿಸಿದ್ದಾರೆ.

ನಕಲಿ ಪಾಸ್‌ಗಳನ್ನು ಇಟ್ಟುಕೊಂಡು ಸಂಚರಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು, ಯಾರು ನಕಲಿ ಪಾಸ್ ತಯಾರು ಮಾಡುವುದಾಗಲಿ ಅದನ್ನು ಬಳಸಿಕೊಂಡು ಓಡಾಡುವುದಾಗಲಿ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಭಾಸ್ಕರ್ ರಾವ್ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT